ಕನ್ನಡ ಮಾತಾಡಲು ನಮ್ಮಲ್ಲಿ ಕೀಳರಿಮೆ ಬೇಡ, ಕನ್ನಡಿಗರೇ ಭಾಷೆಯನ್ನು ಅಸಡ್ಡೆ ಮಾಡುತ್ತಿದ್ದಾರೆ: ಲೂಸ್ ಮಾದ

ಸಿನಿಮಾಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ನಟ-ನಟಿಯರು ಸಿನಿಮಾ ಕುರಿತೇ ಮಾತಾಡುತ್ತಾರೆ. ಆದರೆ, ಮಾದ ಕನ್ನಡದ ಬಗ್ಗೆ ಮಾತಾಡಿದ್ದು ಗಮನ ಸೆಳೆಯಿತು.

ಕನ್ನಡ ಮಾತಾಡಲು ನಮ್ಮಲ್ಲಿ ಕೀಳರಿಮೆ ಬೇಡ, ಕನ್ನಡಿಗರೇ ಭಾಷೆಯನ್ನು ಅಸಡ್ಡೆ ಮಾಡುತ್ತಿದ್ದಾರೆ: ಲೂಸ್ ಮಾದ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Oct 05, 2021 | 10:14 PM

ಕಾಲಮಾನ ಬಹಳ ಆಶ್ಚರ್ಯಕರ ರೀತಿಯಲ್ಲಿ ಬದಲಾಗುತ್ತಿದೆ. ಒಂದು ಸಿನಿಮಾ 25 ದಿನ ಓಡಿದರೂ ಅದನ್ನು ಆಚರಿಸುವಂಥ ದಿನಗಳು ಬಂದುಬಿಟ್ಟಿವೆ. ನಿಮಗೆ ಆಶ್ಚರ್ಯವಾಗಬಹುದು, ಒಂದು ಕನ್ನಡ ಚಿತ್ರ ರಿಲೀಸ್ ಆದ ಮರುದಿನ ಯಶಸ್ವೀ ಎರಡನೇ ದಿನ ಅಂತ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿಕೊಂಡಿತ್ತು! ಮೊದಲಾದರೆ, ಚಿತ್ರ 50 ದಿನ ಇಲ್ಲವೇ 100 ದಿನ ಓಡಿದರೆ ಚಿತ್ರತಂಡ ಅದರ ಯಶಸ್ಸನ್ನು ಅದ್ದೂರಿಯಾಗಿ ಆಚರಿಸುತಿತ್ತು. ಕೋವಿಡ್-19 ನಮ್ಮ ಬದುಕಿನ ಹಲವಾರು ಆಯಾಮಗಳನ್ನು ಬದಲಿಸಿಬಿಟ್ಟಿದೆ ಅನ್ನೋದು ಸುಳ್ಳಲ್ಲ. ಇದನ್ನು ಯಾಕೆ ಹೇಳಬೇಕಾಗಿದೆ ಅಂದರೆ, ಲಂಕೆ ಸಿನಿಮಾ 25 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯ ಕಲಾವಿದರು-ಯೋಗೀಶ್ (ಲೂಸ್ ಮಾದ-ಈ ಹೆಸರಿನಿಂದಲೇ ಅವರು ಜನಪ್ರಿಯರು), ಕೃಷಿ ತಾಪಂಡ, ಕಾವ್ಯ ಶೆಟ್ಟಿ ಮತ್ತು ತಂತ್ರಜ್ಞರು ಮಂಗಳವಾರದಂದು ಸಿನಿಮಾದ ಬಗ್ಗೆ ತಮ್ಮ ಅನುಭವ ಮತ್ತು ಅನಿಸಿಕೆಗಳನ್ನು ಟಿವಿ9ನೊಂದಿಗೆ ಹಂಚಿಕೊಂಡರು.

ಲಂಕೆ ಸಿನಿಮಾನಲ್ಲಿ ಲೂಸ್ ಮಾದ ಅವರ ನಟನೆ ಬಗ್ಗೆ ಭಾರಿ ಪ್ರಶಂಸೆಗಳು ಕೇಳಿ ಬರುತ್ತಿವೆ. ಅವರು ಪ್ರತಿಭಾವಂತ ಅನ್ನೋದರಲ್ಲಿ ಸಂಶಯವಿಲ್ಲ. ಈ ಸಿನಿಮಾ ವಿಶೇಷ ಅನ್ನೋದಿಕ್ಕೆ ಇನ್ನೊಂದು ಕಾರಣವೆಂದರೆ, ಇತ್ತೀಚಿಗೆ ನಿಧನರಾದ ಅಪ್ಟಟ ಪ್ರತಿಭಾವಂತ ಸಂಚಾರಿ ವಿಜಯ್ ಸಹ ಇದರಲ್ಲಿ ನಟಿಸಿದ್ದಾರೆ. ಲೂಸ್ ಮಾದ ಅವರು ಕನ್ನಡ ಭಾಷೆ ಬಗ್ಗೆ ಸ್ವಲ್ಪ ಅವೇಶದಲ್ಲಿ ಮಾತಾಡಿದರು. ಅವರು ಹೇಳಿರುವುದರಲ್ಲಿ ಸತ್ಯಾಂಶ ಅಡಗಿದೆ. ಭಾಷೆಯ ಬಗ್ಗೆ ಕನ್ನಡಿಗರಲ್ಲೇ ಅಸಡ್ಡೆ ಹೆಚ್ಚಾಗಿದೆ.

ಸಿನಿಮಾಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ನಟ-ನಟಿಯರು ಸಿನಿಮಾ ಕುರಿತೇ ಮಾತಾಡುತ್ತಾರೆ. ಆದರೆ, ಮಾದ ಕನ್ನಡದ ಬಗ್ಗೆ ಮಾತಾಡಿದ್ದು ಗಮನ ಸೆಳೆಯಿತು. ಕನ್ನಡಿಗರ ನಡುವೆಯೇ ಕನ್ನಡ ಭಾಷೆ ಪರಕೀಯವಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿ ಮಾತಾಡುವ ಭಾಷೆ ಕನ್ನಡವಾಗಿದ್ದರೂ ಬೇರೆ ಭಾಷೆಗಳಲ್ಲಿ ಮಾತಾಡುವವರನ್ನು ಕಂಡಾಗ ಕೋಪ ಉಕ್ಕುತ್ತದೆ ಎಂದು ಹೇಳಿದ ಅವರು ಕನ್ನಡ ಮಾತಾಡಲು ಜನರಿಗೆ ಯಾಕೆ ಕೀಳರಿಮೆ ಉಂಟಾಗುತ್ತದೆ ಅನ್ನೋದು ಅರ್ಥವಾಗದು ಅಂದರು.

ಇದನ್ನೂ ಓದಿ:  Viral Video: ಸಾರ್ವಜನಿಕ ಶೌಚಾಲಯದಿಂದ ಹೊರಬರುತ್ತಿರುವ ದೈತ್ಯ ಸಿಂಹವನ್ನು ನೋಡಿ ಬೆಚ್ಚಿಬಿದ್ದ ನೆಟ್ಟಿಗರು; ವಿಡಿಯೋ ವೈರಲ್​

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ