Bengaluru: ಮಹಾರಾಣಿ ಕಾಲೇಜು ಬಳಿಯ ಅಂಡರ್​ಪಾಸ್ ನಲ್ಲಿ ಸಿಲುಕಿದ ಲಾರಿ, ಹೊರಗೆಳೆಯಲು ಪೊಲೀಸರಿಂದ ಹರಸಾಹಸ

ಮಳೆ ಬರಲಿ, ಬಾರದಿರಲಿ; ನಗರದಲ್ಲಿರುವ ಅಂಡರ್​ಪಾಸ್ ಗಳು ನಾಗರಿಕರಿಗೆ ಸಮಸ್ಯೆ ಒಡ್ಡುತ್ತಿರುವುದು ಖೇದಕರ ಸಂಗತಿ.

Bengaluru: ಮಹಾರಾಣಿ ಕಾಲೇಜು ಬಳಿಯ ಅಂಡರ್​ಪಾಸ್ ನಲ್ಲಿ ಸಿಲುಕಿದ ಲಾರಿ, ಹೊರಗೆಳೆಯಲು ಪೊಲೀಸರಿಂದ ಹರಸಾಹಸ
|

Updated on: Jun 07, 2023 | 10:24 AM

ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಮಹಾರಾಣಿ ಕಾಲೇಜು (Maharani College) ಬಳಿಯ ಅಂಡರ್​ಪಾಸ್ (underpass) ಮೂಲಕ ಹಾದು ಆಫೀಸು, ಶಾಲಾ-ಕಾಲೇಜುಗಳಿಗೆ ಹೋಗುತ್ತಿದ್ದವರು ತಾವು ಎದ್ದ ಘಳಿಗೆಯನ್ನು ಶಪಿಸುತ್ತಿದ್ದರು. ಕಾರಣ ನಿಮಗೆ ವಿಡಿಯೋದಲ್ಲಿ ಕಾಣುತ್ತಿದೆ. ಮೈಸೂರು ಬ್ಯಾಂಕ್ ಕಡೆಯಿಂದ ಬಂದ ಲಾರಿಯೊಂದು (lorry) ಅಂಡರ್​ಪಾಸ್ ನಲ್ಲಿ ಸಿಲುಕಿಕೊಂಡುಬಿಟ್ಟಿತ್ತು. ಅದನ್ನು ಅಲ್ಲಿಂದ ಹೊರತೆಗೆಯಲು ಸಂಚಾರಿ ಪೊಲೀಸರು ಹರಸಾಹಸ ಪಡಬೇಕಾಯಿತು. ಅಂಡರ್ ಪಾಸ್ ಬಳಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ವಾಹನ ಸವಾರರಿಗೆ ಬದಲೀ ರಸ್ತೆಗಳಿಂದ ಹೋಗುವಂತೆ ಹೇಳಿದರು. ಮಳೆ ಬರಲಿ, ಬಾರದಿರಲಿ; ನಗರದಲ್ಲಿರುವ ಅಂಡರ್​ಪಾಸ್ ಗಳು ನಾಗರಿಕರಿಗೆ ಸಮಸ್ಯೆ ಒಡ್ಡುತ್ತಿರುವುದು ಖೇದಕರ ಸಂಗತಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us