Ma Kamakhya Corridor: ಕಾಶಿ ವಿಶ್ವನಾಥ ಮಾದರಿಯಲ್ಲಿ ಕಾಮಾಖ್ಯ ದೇವಾಲಯ ಕಾರಿಡಾರ್‌ ಪ್ರಧಾನಿ ಮೋದಿ ಶ್ಲಾಘನೆ

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಮಾದರಿಯಲ್ಲಿ ಅಸ್ಸಾಂ ಸರ್ಕಾರವು ಗುವಾಹಟಿಯ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ ನಿರ್ಮಿಸಲು ಯೋಜಿಸುತ್ತಿದೆ ಎಂದು ಹೇಳಲಾಗಿದೆ.

Ma Kamakhya Corridor: ಕಾಶಿ ವಿಶ್ವನಾಥ ಮಾದರಿಯಲ್ಲಿ ಕಾಮಾಖ್ಯ ದೇವಾಲಯ ಕಾರಿಡಾರ್‌ ಪ್ರಧಾನಿ ಮೋದಿ ಶ್ಲಾಘನೆ
|

Updated on:Apr 21, 2023 | 7:34 PM

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಮಾದರಿಯಲ್ಲಿ ಅಸ್ಸಾಂ ಸರ್ಕಾರವು ಗುವಾಹಟಿಯ ಕಾಮಾಖ್ಯ ದೇವಾಲಯದಲ್ಲಿ ಕಾರಿಡಾರ್ ನಿರ್ಮಿಸಲು ಯೋಜಿಸುತ್ತಿದೆ ಎಂದು ಹೇಳಲಾಗಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ನಾಲ್ಕು ನಿಮಿಷಗಳ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಮಾ ಕಾಮಾಖ್ಯ ಕಾರಿಡಾರ್ ಮುಂದಿನ ದಿನಗಳಲ್ಲಿ ಹೇಗೆ ಕಾಣಿಸುತ್ತದೆ ಎಂಬ ವಿವರ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಯ ಕುರಿತು ಹಂಚಿಕೊಂಡ ಪೋಸ್ಟ್ ಅನ್ನು ರೀ ಪೋಸ್ಟ್ ಮಾಡಿದ್ದಾರೆ. ಮಾ ಕಾಮಾಖ್ಯ ಕಾರಿಡಾರ್ ಒಂದು ಹೆಗ್ಗುರುತು. ಕಾಶಿ ವಿಶ್ವನಾಥ ಧಾಮ ಮತ್ತು ಶ್ರೀ ಮಹಾಕಾಲ್ ಮಹಾಲೋಕಗಳು, ಆಧ್ಯಾತ್ಮಿಕ ಅನುಭವವನ್ನು ನೀಡಲು ಇಂದು ರೂಪಾಂತರಗೊಂಡಿವೆ. ಇದರ ಜತೆಗೆ ಇದು ಪ್ರವಾಸೋದ್ಯಮಕ್ಕೂ ಒತ್ತು ನೀಡುತ್ತಿದೆ ಮತ್ತು ಸ್ಥಳೀಯ ಆರ್ಥಿಕತೆ ಉತ್ತೇಜನವನ್ನು ಪಡೆಯುತ್ತದೆ ಎಂದು ಹೇಳಿದ್ದಾರೆ. ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಮತ್ತಷ್ಟು ಜನಪ್ರಿಯವಾಗಿಸುವುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ.

Published On - 7:34 pm, Fri, 21 April 23

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ