ಮದ್ದೂರು ಗಣೇಶ ಗಲಾಟೆಯಲ್ಲಿ ಲಾಠಿ ಏಟು ತಿಂದ ಲೇಡಿ ಕಣ್ಣೀರಿನ ಮಾತು!

Updated on: Sep 08, 2025 | 8:36 PM

ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪೊಲೀಸರು ಲಘು ಲಾಠಿ ಚಾರ್ಜ್​ ಮಾಡಿದ್ದಾರೆ. ಈ ವೇಳೆ ಜ್ಯೋತಿ ಎನ್ನುವರಿಗೆ ಪೊಲೀಸ್ ಕಾನ್​ಸ್ಟೆಬಲ್​ ಲಾಠಿ ತೆಗೆದುಕೊಂಡು ಬಲವಾಗಿ ಹೊಡೆದಿದ್ದಾರೆ. ಪೊಲೀಸಪ್ಪನ ಲಾಠಿ ಏಟಿಗೆ ಭಯಬಿದ್ದ ಯುವತಿ ರಸ್ತೆ ಮೇಲೆಯೇ ಕಿರುಚಾಡಿ, ಗೋಗರೆದಿದ್ದಾಳೆ. ಅಲ್ಲದೇ ಹಣೆ ಹಣೆ ಬಡಿದುಕೊಂಡು ಪೊಲೀಸರಿಗೆ ಇಡೀ ಶಾಪ ಹಾಕುತ್ತ ಕಣ್ಣೀರು ಹಾಕಿದ್ದಾಳೆ. ಸದ್ಯ ಜ್ಯೋತಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ.

ಮಂಡ್ಯ, (ಸೆಪ್ಟೆಂಬರ್ 08): ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪೊಲೀಸರು ಲಘು ಲಾಠಿ ಚಾರ್ಜ್​ ಮಾಡಿದ್ದಾರೆ. ಈ ವೇಳೆ ಜ್ಯೋತಿ ಎನ್ನುವರಿಗೆ ಪೊಲೀಸ್ ಕಾನ್​ಸ್ಟೆಬಲ್​ ಲಾಠಿ ತೆಗೆದುಕೊಂಡು ಬಲವಾಗಿ ಹೊಡೆದಿದ್ದಾರೆ. ಪೊಲೀಸಪ್ಪನ ಲಾಠಿ ಏಟಿಗೆ ಭಯಬಿದ್ದ ಯುವತಿ ರಸ್ತೆ ಮೇಲೆಯೇ ಕಿರುಚಾಡಿ, ಗೋಗರೆದಿದ್ದಾಳೆ. ಅಲ್ಲದೇ ಹಣೆ ಹಣೆ ಬಡಿದುಕೊಂಡು ಪೊಲೀಸರಿಗೆ ಇಡೀ ಶಾಪ ಹಾಕುತ್ತ ಕಣ್ಣೀರು ಹಾಕಿದ್ದಾಳೆ. ಸದ್ಯ ಜ್ಯೋತಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಜ್ಯೋತಿ ಎರಡು ಸಾವಿರ ರೂಪಾಯಿ ಗ್ಯಾರಂಟಿ ಆಸೆಗೆ ವೋಟ್ ಹಾಕಿ ತಪ್ಪು ಮಾಡಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾಳೆ.

Published on: Sep 08, 2025 08:35 PM
Follow Us