ನಾವೇನು ಪಾಕಿಸ್ತಾನದಲ್ಲಿದ್ದೇವಾ? ಮದ್ದೂರು ಗಲಭೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

Updated on: Sep 08, 2025 | 12:17 PM

ಮದ್ದೂರಿನ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದ ಘಟನೆಯ ಬಗ್ಗೆ ಬಿಜೆಪಿ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ನಿಷ್ಕ್ರಿಯತೆ ಮತ್ತು ಸರ್ಕಾರದ ಕುಮ್ಮಕ್ಕನ್ನು ಅವರು ಆರೋಪಿಸಿದ್ದಾರೆ. ಈ ಘಟನೆಯನ್ನು ಉಲ್ಲೇಖಿಸಿ ಹಿಂದೂಗಳನ್ನು ಗುರಿಯಾಗಿಸುವ ಪ್ರಯತ್ನಗಳ ಬಗ್ಗೆಯೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 8: ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂಬ ಅನುಮಾನ ಬರುವಂತೆ ಈ ಸರ್ಕಾರ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು ನಡೆಯುತ್ತಾ ಇವೆ. ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರಿನಲ್ಲಿ ಅವರ ಗ್ಯಾಂಗ್ ಬಾಲ ಬಿಚ್ಚಿದೆ. ಅವರೆಲ್ಲ ಸಿಎಂ ಸಿದ್ದರಾಮಯ್ಯ ಸುತ್ತ ಸುತ್ತುಕೊಂಡು ಬಿಟ್ಟಿದ್ದಾರೆ. ಈ ಘಟನೆಗೆ ನೇರ ಕಾರಣ ಸರ್ಕಾರ. ಸರ್ಕಾರದ ಕುಮ್ಮಕ್ಕು ಇಲ್ಲದೆ ಈ ಘಟನೆಗಳು ನಡೆಯುತ್ತಿರಲಿಲ್ಲ. ಸಾರ್ವಜನಿಕ ರಸ್ತೆಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮಾಡಿದರೆ ತಪ್ಪೇನು? ಸಾರ್ವಜನಿಕ ರಸ್ತೆ ಇವರಪ್ಪನ ಆಸ್ತಿಯಾ ಎಂದು ಅಶೋಕ್ ಗುಡುಗಿದರು. ಅಶೋಕ್ ಮಾತಿನ ಪೂರ್ತಿ ವಿವರ ವಿಡಿಯೋದಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ