AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮಡೆನೂರು ಮನು ಮೊದಲ ರಿಯಾಕ್ಷನ್

‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮಡೆನೂರು ಮನು ಮೊದಲ ರಿಯಾಕ್ಷನ್

ರಾಜೇಶ್ ದುಗ್ಗುಮನೆ
|

Updated on:Jun 07, 2025 | 1:54 PM

Share

ಮಡೆನೂರು ಮನು ಅವರು ಜೈಲಿನಿಂದ ಹೊರ ಬಂದಿದ್ದಾರೆ. ಅತ್ಯಾಚಾರ ಕೇಸ್​ನಲ್ಲಿ ಜೈಲು ಸೇರಿದ್ದ ಅವರಿಗೆ ಜಾಮೀನು ಸಿಕ್ಕಿದೆ. ಈ ಪ್ರಕರಣದ ಬಗ್ಗೆ ಅವರು ಮೊದಲ ರಿಯಾಕ್ಷನ್ ಕೊಟ್ಟಿದ್ದಾರೆ. ಅವರಿಗೆ ಆತಂಕ ಶುರುವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಅವರು ಏನು ಹೇಳಿದರು ನೋಡಿ.

ಅತ್ಯಾಚಾರ ಕೇಸ್​ನಲ್ಲಿ ಮಡೆನೂರು ಮನು (Madenuru Manu) ಅವರು ಜೈಲು ಸೇರಿದ್ದರು. ಈಗ ಅವರು ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಕನ್ನಡದ ಖ್ಯಾತ ನಾಮರಿಗೆ ಅವರು ಅಗೌರವ ತೋರಿ ಮಾತನಾಡಿದ್ದರು ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮನು ಮಾತನಾಡಿದ್ದಾರೆ. ‘ಆಡಿಯೋ ಮೂಲಕ ನನ್ನ ನಾಶ ಮಾಡಿದರು. ಆದರೆ, ಆ ಆಡಿಯೋ ನನ್ನದಲ್ಲ. ಹಲವು ವರ್ಷಗಳ ಕಾಲ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದೇನೆ. ನನ್ನ ಕನಸು ಈಡೇರುವಾಗ ಈ ರೀತಿ ಆಯ್ತು. ಈ ಪರಿಸ್ಥಿತಿ ಯಾವ ಶತ್ರುವಿಗೂ ಬರಬಾರದು. ಈ ರೀತಿ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 07, 2025 01:53 PM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More