ಮಧು ಬಂಗಾರಪ್ಪ ಸಣ್ಣತನದ ರಾಜಕಾರಣ ಮತ್ತು ಅಧಿಕಾರಿಗಳನ್ನು ಬೆದರಿಸುವುದು ನಿಲ್ಲಿಸಬೇಕು: ಬಿವೈ ರಾಘವೇಂದ್ರ

ಮಧು ಬಂಗಾರಪ್ಪ ಸಣ್ಣತನದ ರಾಜಕಾರಣ ಮತ್ತು ಅಧಿಕಾರಿಗಳನ್ನು ಬೆದರಿಸುವುದು ನಿಲ್ಲಿಸಬೇಕು: ಬಿವೈ ರಾಘವೇಂದ್ರ
|

Updated on: Jan 15, 2024 | 6:45 PM

ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ ಬಂಗಾರಪ್ಪನರ ಪುತ್ರನಾಗಿರುವ ಮಧು ಬಂಗಾರಪ್ಪನವರಿಂದ ಸಣ್ಣತನದ ರಾಜಕಾರಣ ನಿರೀಕ್ಷಿಸಿರಲಿಲ್ಲ, ರವಿವಾರದಂದು ನಡೆದ ಸಭೆಯೊಂದರಲ್ಲಿ ಅವರು ಮುಖ್ಯಮಂತ್ರಿಗಳ ಮುಂದೆ ತಾನು ವಿರೋಧಪಕ್ಷದ ಶಾಸಕರನ್ನು ಹದ್ದುಬಸ್ತುನಲ್ಲಿಟಿರುವುದಾಗಿ ಕೊಚ್ಚಿಕೊಳ್ಳುತ್ತಿದ್ದರು, ಈ ಬಗೆಯ ದ್ವೇಷದ ರಾಜಕಾರಣದಿಂದ ಯಾರಿಗೂ ಪ್ರಯೋಜನವಿಲ್ಲ ಎಂದು ರಾಘವೇಂದ್ರ ಹೇಳಿದರು.

ಶಿವಮೊಗ್ಗ: ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ವಿರೋಧ ಪಕ್ಷದ ನಾಯಕರ ಬಗ್ಗೆ ಮಾತಾಡುವ ನಾಲಗೆ ಹರಿಬಿಡುವ ವಿಚಾರ ಕನ್ನಡಿಗರಿಗೆ ಗೊತ್ತಿರದ ವಿಚಾರವೇನೂ ಅಲ್ಲ. ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಶಿವಮೊಗ್ಗದ ಬಿಜೆಪಿ ಸಂಸದ ಬಿವೈ ರಾಘವೇಂದ್ರ (BY Raghavendra), ಸಚಿವ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು, ಅಧಿಕಾರಿಗಳ ಮೇಲೆ ದರ್ಪ ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದರು. ಶಿವಮೊಗ್ಗ ಜಿಲ್ಲೆಯಲ್ಲಿ 100 ಬಿಎಸ್ ಎನ್ ಎಲ್ ಟಾವರ್​ಗಳಿಗೆ (BSNL towers) ಕೇಂದ್ರ ಅರಣ್ಯ ಸಚಿವಾಲಯದಿಂದ ತಾವು ಕ್ಲೀಯರನ್ಸ್ ಕೊಡಿಸಿದ್ದು ಇನ್ನೇನು ಕೆಲಸ ಆರಂಭಾವಾಗಲಿದೆ ಎಂದ ರಾಘವೇಂದ್ರ, ಮಧು ಬಂಗಾರಪ್ಪ ಅಧಿಕಾರಿಗಳನ್ನು ಹೆದರಿಸುವ ಭಯ ಹುಟ್ಟಿಸುವ ಕೆಲಸದಲ್ಲಿ ತೊಡಗಿದ್ದಾರೆಂದು ಹೇಳಿದರು. ತಾನು ನಡೆಸುವ ಸಭೆಗಳಿಗೆ ಹಾಜರಾಗುವ ಆಧಿಕಾರಿಗಳಿಗೆ ಮಧು ಬಂಗಾರಪ್ಪ ಗದರುತ್ತಾರೆ, ಮೀಟಿಂಗ್ ಹಾಜರಾಗಬಾರದೆಂದು ತಾಕೀತು ಮಾಡುತ್ತಾರೆ ಎಂದು ರಾಘವೇಂದ್ರ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಇಂಥ ಸಣ್ಣತನ ಪ್ರದರ್ಶಿಸಬಾರದು ಎಂದು ಸಂಸದ ಖಾರವಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ