ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ 7 ಜನ ಸಾವು; ಆಸ್ಪತ್ರೆಯಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ

Updated on: Dec 31, 2025 | 7:42 PM

ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಕೊಳಕು ನೀರಿನ ಬಗ್ಗೆ ದೂರುಗಳು ಬರುತ್ತಿದ್ದರೂ ಇನ್ನೂ ಯಾವುದೇ ಪರಿಹಾರ ಕಂಡುಬಂದಿಲ್ಲ. ಈ ಪ್ರದೇಶದಲ್ಲಿ ವಾಂತಿ, ಅತಿಸಾರ, ಹೊಟ್ಟೆ ನೋವು ಮತ್ತು ವೀಕ್​​ನೆಸ್​​ನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಸುಮಾರು 2,000 ಜನರು ಇದರಿಂದ ಬಾಧಿತರಾಗಿದ್ದಾರೆ ಎಂದು ವರದಿಯಾಗಿದೆ. ಇಂದೋರ್‌ನ ವಿವಿಧ ಆಸ್ಪತ್ರೆಗಳಿಗೆ ಅನೇಕ ರೋಗಿಗಳು ದಾಖಲಾಗಿದ್ದಾರೆ. 25 ರಿಂದ 30 ಆರೋಗ್ಯ ಇಲಾಖೆಯ ತಂಡಗಳು ಮನೆ-ಮನೆ ಸಮೀಕ್ಷೆಗಳನ್ನು ನಡೆಸುತ್ತಿವೆ. ಇಲ್ಲಿಯವರೆಗೆ, 1,100 ಕ್ಕೂ ಹೆಚ್ಚು ಮನೆಗಳನ್ನು ಪರಿಶೀಲಿಸಲಾಗಿದೆ ಮತ್ತು ನಿವಾಸಿಗಳು ಕುಡಿಯುವ ಮೊದಲು ತಮ್ಮ ನೀರನ್ನು ಕುದಿಸಿ ಕುಡಿಯಲು ಸೂಚಿಸಲಾಗಿದೆ.

ಇಂದೋರ್‌, ಡಿಸೆಂಬರ್ 31: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಕಲುಷಿತ ನೀರು ಸೇವನೆಯಿಂದ 7 ಜನರು ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿಯಾದರು. ಮುನ್ನೆಚ್ಚರಿಕಾ ಕ್ರಮವಾಗಿ ಮುನ್ಸಿಪಲ್ ಕಾರ್ಪೊರೇಷನ್ ಮನೆಗಳಿಗೆ ನೀರು ಸರಬರಾಜು ಮಾಡುತ್ತಿದೆ, ಯಾವುದೇ ರೀತಿಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ.

ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಕೊಳಕು ನೀರಿನ ಬಗ್ಗೆ ದೂರುಗಳು ಬರುತ್ತಿದ್ದರೂ ಇನ್ನೂ ಯಾವುದೇ ಪರಿಹಾರ ಕಂಡುಬಂದಿಲ್ಲ. ಈ ಪ್ರದೇಶದಲ್ಲಿ ವಾಂತಿ, ಅತಿಸಾರ, ಹೊಟ್ಟೆ ನೋವು ಮತ್ತು ವೀಕ್​​ನೆಸ್​​ನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಸುಮಾರು 2,000 ಜನರು ಇದರಿಂದ ಬಾಧಿತರಾಗಿದ್ದಾರೆ ಎಂದು ವರದಿಯಾಗಿದೆ. ಇಂದೋರ್‌ನ ವಿವಿಧ ಆಸ್ಪತ್ರೆಗಳಿಗೆ ಅನೇಕ ರೋಗಿಗಳು ದಾಖಲಾಗಿದ್ದಾರೆ. 25 ರಿಂದ 30 ಆರೋಗ್ಯ ಇಲಾಖೆಯ ತಂಡಗಳು ಮನೆ-ಮನೆ ಸಮೀಕ್ಷೆಗಳನ್ನು ನಡೆಸುತ್ತಿವೆ. ಇಲ್ಲಿಯವರೆಗೆ, 1,100 ಕ್ಕೂ ಹೆಚ್ಚು ಮನೆಗಳನ್ನು ಪರಿಶೀಲಿಸಲಾಗಿದೆ ಮತ್ತು ನಿವಾಸಿಗಳು ಕುಡಿಯುವ ಮೊದಲು ತಮ್ಮ ನೀರನ್ನು ಕುದಿಸಿ ಕುಡಿಯಲು ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ