ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ಬೆಂಗಳೂರಿಗೆ ಬರಬೇಕಿದ್ದ ‘ಕೈ’ ಶಾಸಕರ ಪ್ರವಾಸ ಕೊನೇ ಕ್ಷಣದಲ್ಲಿ ರದ್ದು
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಬೆಂಗಳೂರು ಏರ್ಪೋರ್ಟ್ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್ ಲಾ ರೆಸಾರ್ಟ್ಗೆ ತೆರಳಲಿದ್ದಾರೆ. ಅವರನ್ನು ಕರೆದೊಯ್ಯಲು ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು, ಜೂನ್ 09: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಭೀತಿ ಹಿನ್ನೆಲೆ, ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರೆ ಎನ್ನಲಾಗಿತ್ತು. ಭೋಪಾಲ್ನಿಂದ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಲಿರುವ ಶಾಸಕರು, ಕೆಐಎಬಿಯಿಂದ ವಂಡರ್ ಲಾ ರೆಸಾರ್ಟ್ಗೆ ತೆರಳಲಿದ್ದಾರೆ. 63 ಶಾಸಕರು ಸೇರಿದಂತೆ 75 ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ರೆಸಾರ್ಟ್ನಲ್ಲಿ 54 ರೂಮ್ ಬುಕ್ಕಿಂಗ್ ಆಗಿವೆ. ಜೂನ್ 17ರ ರಾತ್ರಿ ಅಥವಾ 18ರ ಬೆಳಗ್ಗೆ 63 ಶಾಸಕರು ಇಲ್ಲಿಂದ ಹಿಂದಿರುಗಲಿದ್ದಾರೆ ಎಂಬ ಮಾಹಿತಿ ಇತ್ತು. ಆದರೆ ಕೊನೇ ಕ್ಷಣದಲ್ಲಿ ಪ್ರಯಾಣ ರದ್ದಾಗಿದ್ದು, ಭೋಪಾಲ್ ಏರ್ಪೋರ್ಟ್ನಿಂದ ಶಾಸಕರು ವಾಪಸ್ ಆಗಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 09, 2026 07:07 PM
Follow Us
