ಮಡಿಕೇರಿ-ಭಾಗಮಂಡಲ ರಸ್ತೆಯೂ ಜಲಾವೃತ, ಅಪೂರ್ಣಗೊಂಡ ಫ್ಲೈಓವರ್ ಅನ್ನೇ ಸಂಚಾರಕ್ಕೆ ಬಳಸುತ್ತಿರುವ ಜನ

ಸಾಧು ಶ್ರೀನಾಥ್​

Updated on: Jul 06, 2023 | 2:28 PM

ನದಿ ತೊರೆಗಳು ನಿಧಾನಕ್ಕೆ ಮೈದುಂಬಿಕೊಳ್ಳುತ್ತಿವೆ. ಆರಿದ್ರಾ ಮಳೆ ರೈತರಿಗೆ ಹರ್ಷ ತಂದಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ‌ಮಟ್ಟ ಏರುತ್ತಿದೆ.

ಕೊಡಗು ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಜುಲೈ 8 ರವರೆಗೂ ಕೊಡಗಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆಯಿದೆ. ಮುನ್ನೆಚ್ಚರಿಕೆಯಿಂದ ಇರುವಂತೆ ಜನರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ತೊರೆಗಳು ನಿಧಾನಕ್ಕೆ ಮೈದುಂಬಿಕೊಳ್ಳುತ್ತಿವೆ. ಆರಿದ್ರಾ ಮಳೆ ರೈತರಿಗೆ ಹರ್ಷ ತಂದಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ‌ಮಟ್ಟ ಏರುತ್ತಿದೆ. ಇದರಿಂದ ಭಾಗಮಂಡಲ ತ್ರಿವೇಣಿ ಸಂಗಮ‌ ಮುಳುಗಡೆ ಸಾಧ್ಯತೆಯಿದೆ. ಮಡಿಕೇರಿ-ಭಾಗಮಂಡಲ ರಸ್ತೆಯೂ ಜಲಾವೃತವಾಗುವ ಸಾಧ್ಯತೆ ಇದೆ. ಅಪೂರ್ಣಗೊಂಡಿರುವ ಭಾಗಮಂಡಲ ಫ್ಲೈಓವರ್ ಅನ್ನೇ ಜನ ಸಂಚಾರಕ್ಕೆ ಬಳಸುತ್ತಿದ್ದಾರೆ.

Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು