ರಾಜಕೀಯ ಅಂದರೇ ಸಿಡಿ ಹಿಡಿದುಕೊಂಡು ಓಡಾಡಿದಂತಲ್ಲ: ಸಿಪಿ ಯೋಗೇಶ್ವರ್​ಗೆ ಶಾಸಕ ಬಾಲಕೃಷ್ಣ ಟಾಂಗ್

Edited By:

Updated on: Oct 09, 2023 | 9:02 PM

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ಇಡೀ ರಾಜಕೀಯ ಜೀವನ ಬುರುಡೆ ಬಿಟ್ಕೊಂಡೇ ತಿರುಗಾಡಿದ್ದಾರೆ. ರಾಜಕೀಯ ಅಂದರೇ ಹೈಕಮಾಂಡ್ ಬಳಿ ಸಿಡಿ ಹಿಡಿದುಕೊಂಡು ಓಡಾಡಿದಂತೆ ಅಲ್ಲ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 09: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಬುರುಡೆ ರಾಜ. ರಾಜಕೀಯ ಅಂದರೇ ಹೈಕಮಾಂಡ್ ಬಳಿ ಸಿಡಿ ಹಿಡಿದುಕೊಂಡು ಓಡಾಡಿದಂತೆ ಅಲ್ಲ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮೊದಲು ಬರೋದಕ್ಕೆ ಹೇಳಿ. ಇಡೀ ರಾಜಕೀಯ ಜೀವನ ಬುರುಡೆ ಬಿಟ್ಕೊಂಡೇ ತಿರುಗಾಡಿದವನು. ಈಗ ಕಾಂಗ್ರೆಸ್ ಮುಗಿಸ್ತೀವಿ ಅಂತ ಜೆಡಿಎಸ್, ಬಿಜೆಪಿ ಒಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಮಂತ್ರಿ ಮಾಡಿದ ಯಡಿಯೂರಪ್ಪರನ್ನೇ ಕೆಳಗೆ ಇಳಿಸಿದವರಲ್ವಾ? ಹೆಚ್​ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರ ಬೀಳಿಸಿದವರು ಯೋಗೇಶ್ವರ್ ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ನಾವಾಗಿದ್ದರೆ ಜೀವನ ಪರ್ಯಂತ ಇವರ ನೆರಳನ್ನೂ ತುಳಿಯುತ್ತಿರಲಿಲ್ಲ. ರಾಜಕೀಯಗೋಸ್ಕರ ಯೋಗೇಶ್ವರ್ ಏನು ಬೇಕಾದರೂ ಮಾಡುತ್ತಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More