ಹಳ್ಳಿ ಹುಡಗನ ಕೈಚಳಕ: ಜೋಳ, ಅಕ್ಕಿಯಿಂದ ಭವ್ಯ ಶ್ರೀರಾಮಮಂದಿರ ನಿರ್ಮಾಣ

Edited By:

Updated on: Jan 21, 2024 | 9:35 PM

ಗದಗ ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ ಅವರು 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮಮಂದಿರ ನಿರ್ಮಿಸಿದ್ದಾರೆ.

ಗದಗ, ಜನವರಿ 21: ಅಯೋಧ್ಯೆಯಲ್ಲಿ (Ayodhya) ನಾಳೆ (ಜ.22) ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾಯುತ್ತಿದ್ದಾರೆ. ಭಕ್ತರು ವಿವಿಧ ರೂಪದಲ್ಲಿ ಪ್ರಭು ಶ್ರೀರಾಮಚಂದ್ರನಿಗೆ (Sri Ram) ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಇದೀಗ ಗದಗ ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ ಅವರು 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮಮಂದಿರ ನಿರ್ಮಿಸಿದ್ದಾರೆ.

ಮತ್ತೊಂದು ಕಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ‌ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮಮಂದಿರ ಸೆಟ್ ಹಾಕಲಾಗಿದೆ. ರಾಮಮಂದಿರ ಸೆಟ್ ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More