Video: ಮಹಾಕುಂಭ ಮೇಳ, ಸಂಗಮದಲ್ಲಿ ಗಂಗಾ ಮಾತೆಗೆ ನಮಸ್ಕರಿಸಿದ ಮೋದಿ

Updated on: Feb 05, 2025 | 12:50 PM

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮುಳುಗೆದ್ದು ಬಳಿಕ ಗಂಗಾ ಮಾತೆಗೆ ನಮಸ್ಕರಿಸಿದ್ದಾರೆ. ಮೊದಲು ತ್ರಿವೇಣಿ ಸಂಗಮದಲ್ಲಿ ಮೋದಿ ಸ್ನಾನ ಮಾಡುವಾಗ ಕೈಯಲ್ಲಿ ಹಾಗೂ ಕುತ್ತಿಗೆಯಲ್ಲಿ ರುದ್ರಾಕ್ಷಿ ಧರಿಸಿದ್ದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲ್ಲಿದ್ದರು ಆದರೆ ಪ್ರಧಾನಿ ಒಬ್ಬರೇ ಸ್ನಾನ ಮಾಡಿದರು

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮುಳುಗೆದ್ದು ಬಳಿಕ ಗಂಗಾ ಮಾತೆಗೆ ನಮಸ್ಕರಿಸಿದ್ದಾರೆ. ಮೊದಲು ತ್ರಿವೇಣಿ ಸಂಗಮದಲ್ಲಿ ಮೋದಿ ಸ್ನಾನ ಮಾಡುವಾಗ ಕೈಯಲ್ಲಿ ಹಾಗೂ ಕುತ್ತಿಗೆಯಲ್ಲಿ ರುದ್ರಾಕ್ಷಿ ಧರಿಸಿದ್ದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲ್ಲಿದ್ದರು ಆದರೆ ಪ್ರಧಾನಿ ಒಬ್ಬರೇ ಸ್ನಾನ ಮಾಡಿದರು. ಈ ಸಮಯದಲ್ಲಿ ಸಿಆರ್‌ಪಿಎಫ್ ಮತ್ತು ಸೇನಾ ಸಿಬ್ಬಂದಿ ಕೂಡ ಅಲ್ಲಿದ್ದರು. ಪ್ರಧಾನಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಯಮುನಾ ನದಿಯಲ್ಲಿ ದೋಣಿ ವಿಹಾರ ನಡೆಸಿದರು. ಫೆಬ್ರವರಿ 26ರ ಮಹಾಶಿವರಾತ್ರಿವರೆಗೂ ಕುಂಭ ಮೇಳ ಇರಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More