ಮಹಾಸಂಕಲ್ಪ ಮತ್ತು ನವಸಂಕಲ್ಪ, 2037ರ ಭವ್ಯ ಕನಸು: ಡಿಕೆ ಶಿವಕುಮಾರ್ ಸಂಕಲ್ಪ
ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇಂದಿಗೆ (ಸೆಪ್ಟೆಂಬರ್ 10) 100 ದಿನಗಳು ಪೂರೈಸಿವೆ. ಹೀಗಾಗಿ ಈ ಶತಕದ ಸಂಭ್ರಮಕ್ಕಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ದೃಢ ಕರ್ನಾಟಕದ ಸಂಕಲ್ಪ ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ವಿಚಾರಣಗಳನ್ಜು ಹಂಚಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾರ್ಯಕ್ರಮಗಳನ್ನು ನೀಡುವ ಬಗ್ಗೆ ವಿವರಿಸಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 10): ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇಂದಿಗೆ (ಸೆಪ್ಟೆಂಬರ್ 10) 100 ದಿನಗಳು ಪೂರೈಸಿವೆ. ಹೀಗಾಗಿ ಈ ಶತಕದ ಸಂಭ್ರಮಕ್ಕಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ದೃಢ ಕರ್ನಾಟಕದ ಸಂಕಲ್ಪ ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಹತ್ವದ ವಿಚಾರಣಗಳನ್ಜು ಹಂಚಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಕಾರ್ಯಕ್ರಮಗಳನ್ನು ನೀಡುವ ಬಗ್ಗೆ ವಿವರಿಸಿದ್ದಾರೆ.
2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವುದು, ಬಡತನ ಮತ್ತು ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದು ಹಾಗೂ ಅಪೌಷ್ಟಿಕತೆಯನ್ನು 5% ಕ್ಕಿಂತ ಕಡಿಮೆ ಮಾಡುವುದು ಸರ್ಕಾರದ ಪ್ರಮುಖ ‘ಮಹಾಸಂಕಲ್ಪ’ವಾಗಿದೆ. ಇದಕ್ಕಾಗಿ ‘ನವಸಂಕಲ್ಪ’ದಡಿ ಆರೋಗ್ಯ, ಶಿಕ್ಷಣ ಹಾಗೂ ಮೇಕೆದಾಟು-ಎತ್ತಿನಹೊಳೆಯಂತಹ ಜಲ ಭದ್ರತಾ ಯೋಜನೆಗಳಿಗೆ ವೇಗ ನೀಡಲಾಗಿದೆ. ಮುಂಬರುವ 500 ದಿನಗಳಲ್ಲಿ ಮೂಲಸೌಕರ್ಯಕ್ಕಾಗಿ ₹1.5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಹಾಗೂ ₹3 ಲಕ್ಷ ಕೋಟಿ ಹೊಸ ಹೂಡಿಕೆ ಆಕರ್ಷಿಸುವ ಗುರಿ ಹೊಂದಲಾಗಿದೆ. ಜೊತೆಗೆ, 5 ಹೊಸ ಮಹಾನಗರಗಳ ನಿರ್ಮಾಣ, 1 ಲಕ್ಷ ಸರ್ಕಾರಿ ಹಾಗೂ 5 ಲಕ್ಷ ಖಾಸಗಿ ಉದ್ಯೋಗ ಸೃಷ್ಟಿ, ನಿರಾಶ್ರಿತರಿಗೆ 5 ಲಕ್ಷ ನಿವೇಶನ ಹಂಚಿಕೆ ಮತ್ತು ಬೆಂಗಳೂರಿನಲ್ಲಿ 5 ಹೊಸ ಲಾಲ್ಬಾಗ್ ಮಾದರಿಯ ಉದ್ಯಾನವನಗಳು ಹಾಗೂ 7 ಕೆರೆಗಳ ಪುನರುಜ್ಜೀವನಕ್ಕೆ ದೃಢ ಹೆಜ್ಜೆ ಇಡಲಾಗಿದೆ. ಆರ್ಥಿಕವಾಗಿ ಸಬಲ, ಸಾಮಾಜಿಕವಾಗಿ ಸಮಾನ ಹಾಗೂ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ನಾಳಿನ ಭಾರತಕ್ಕೆ ಕರ್ನಾಟಕವನ್ನು ಮಾದರಿಯಾಗಿಸುವತ್ತ ಇದು ದಿಟ್ಟ ಹೆಜ್ಜೆಯಾಗಿದೆ ಎಂದಿದ್ದಾರೆ.
