ಕಲಬುರಗಿಯಲ್ಲಿ ಇಂದು ಮಹಾದಾಸೋಹಿ ಶರಣಬಸವೇಶ್ವರ ಅದ್ದೂರಿ ರಥೋತ್ಸವ, ಲಕ್ಷಾಂತರ ಭಕ್ತರು ಭಾಗಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 19, 2025 | 7:55 PM

ಕಲಬುರಗಿಯಲ್ಲಿ ಅದಾಗಲೇ ಧಗಿಧಗಿಸುವ ಬಿಸಿಲು, ಇವತ್ತಿನ ಉಷ್ಣಾಂಶ 39 ಡಿಗ್ರೀ ಸೆಲ್ಸಿಯಸ್! ರಥೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿರುವ ಜನ ರಥ ಸಾಗುವ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೆರಳಿರುವ ಸ್ಥಳಗಳನ್ನು ಆಯ್ದುಕೊಂಡಿದ್ದಾರೆ. ಕಬ್ಬಿನ ಹಾಲಿಗೆ ಜಾತ್ರೆಯಲ್ಲಿ ಎಲ್ಲಿಲ್ಲದೆ ಬೇಡಿಕೆ. ಬಾಯಾರಿಸಿಕೊಳ್ಳಲು ಜನ ಕಬ್ಬಿನ ಹಾಲು, ನೀರು ಮತ್ತು ಐಸ್ ಕ್ಯಾಂಡಿಗಳ ಮೊರೆ ಹೋಗುತ್ತಿದ್ದಾರೆ.

ಕಲಬುರಗಿ, 19 ಮಾರ್ಚ್: ಬಿಸಿಲುನಾಡು ಅಂತಲೂ ಕರೆಸಿಕೊಳ್ಳುವ ಕಲಬುರಗಿಯಲ್ಲಿ ಇಂದು ಮಹಾದಾಸೋಹಿ ಶರಣ ಬಸವೇಶ್ವರರ ರಥೋತ್ಸವ. ಅಪ್ಪುನ್ ಜಾತ್ರಿ ಎಂದು ಹೆಸರಾಗಿರುವ ಕಲಬುರಗಿಯಲ್ಲಿ 203 ನೇ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರುತ್ತಿದೆ. ಶರಣಬಸವೇಶ್ವರ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ನೆರೆಯುತ್ತಾರೆ. ಸುತ್ತಮುತ್ತಲಿನ ಜಿಲ್ಲೆಯ ಜನರಲ್ಲದೆ ನೆರೆ ರಾಜ್ಯಗಳಾಗಿರುವ ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಿಂದಲೂ ಸಾವಿರಾರು ಜನ ಆಗಮಿಸಿ ರಥೋತ್ಸವ ದಲ್ಲಿ ಪಾಲ್ಗೊಳ್ಳುತ್ತಾರೆ. ಸರ್ವಾಲಂಕೃತಗೊಂಡಿರುವ ರಥ ಅಪ್ಪುನ್ ಗುಡಿ ಅವರಣದಲ್ಲಿ ನಿಂತಿರುವುದನ್ನು ಮತ್ತು ಭಕ್ತರು ಅದರ ಸುತ್ತು ಹಾಕುವ ದೃಶ್ಯಗಳಲ್ಲಿ ನೋಡಬಹುದು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚಿತ್ರದುರ್ಗ: ತಿಪ್ಪೇರುದ್ರಸ್ವಾಮಿ ಅದ್ಧೂರಿ ರಥೋತ್ಸವ, ಕ್ವಿಂಟಾಲ್ ಗಟ್ಟಲೆ ಕೊಬ್ಬರಿ‌ ಸುಟ್ಟು ಹರಕೆ ತೀರಿಸಿದ ಭಕ್ತರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.