ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

Updated on: Jan 18, 2025 | 5:16 PM

ಮಹಾಕುಂಭವು ಭಾರತದ ಶ್ರೀಮಂತ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಆಚರಣೆಯಾಗಿದೆ. ಈ ಪವಿತ್ರ ಸಂಗಮದಲ್ಲಿ ಸಚಿವ ರಾಜನಾಥ್ ಸಿಂಗ್ ತೀರ್ಥ ಸ್ನಾನ ಮಾಡಿದ್ದಾರೆ. ರಕ್ಷಣಾ ಸಚಿವರೊಂದಿಗೆ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಮತ್ತು ಪಕ್ಷದ ಇತರ ನಾಯಕರು ಇದ್ದರು. ಉತ್ತರ ಪ್ರದೇಶ ಸರ್ಕಾರವು 45 ಕೋಟಿಗೂ ಹೆಚ್ಚು ಜನರು ಮಹಾಕುಂಭಕ್ಕೆ ಹಾಜರಾಗುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಕುಂಭಮೇಳದ ಮೊದಲ ದಿನದಂದು ದಾಖಲೆಯ 1.70 ಕೋಟಿ ಯಾತ್ರಿಕರು ಪವಿತ್ರ ಸ್ನಾನ ಮಾಡಿದರು ಮತ್ತು ಜನವರಿ 14ರಂದು ಸುಮಾರು 3.50 ಕೋಟಿ ಜನರು ಸಂಗಮದಲ್ಲಿ ಸ್ನಾನ ಮಾಡಿದರು.

ಪ್ರಯಾಗರಾಜ್: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಅವರೊಂದಿಗೆ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಮತ್ತು ಪಕ್ಷದ ಇತರ ನಾಯಕರು ಇದ್ದರು. ಮಹಾಕುಂಭದ 6ನೇ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಚಿವ ರಾಜನಾಥ್ ಸಿಂಗ್ ಸ್ನಾನ ಮಾಡಿದರು. ಬಳಿಕ, ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ ಆರತಿ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಕಳೆದ 6 ದಿನಗಳಲ್ಲಿ ಪ್ರಪಂಚದಾದ್ಯಂತದ 7.3 ಕೋಟಿಗೂ ಹೆಚ್ಚು ಭಕ್ತರು ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More