ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಭೂತಾನ್‌ನ ರಾಜ, ಸಿಎಂ ಯೋಗಿ ಆದಿತ್ಯನಾಥ್ ಆರತಿ

ಪ್ರಯಾಗರಾಜ್‌ನ ಮಹಾಕುಂಭದಲ್ಲಿ ಭೂತಾನ್‌ನ ರಾಜ, ಸಿಎಂ ಯೋಗಿ ಆದಿತ್ಯನಾಥ್ ಆರತಿ

ಸುಷ್ಮಾ ಚಕ್ರೆ
|

Updated on: Feb 04, 2025 | 4:08 PM

ಭೂತಾನ್‌ನ ರಾಜ ಜಿಗ್ಮೆ ಖೇಸರ್ ನಮ್ಗ್ಯೇಲ್ ವಾಂಗ್‌ಚುಕ್ ಅವರು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ 2025ರ ಮಹಾಕುಂಭಕ್ಕೆ ಭೇಟಿ ನೀಡಿದ್ದಾರೆ. ಭೂತಾನ್ ರಾಜನನ್ನು ಸ್ವಾಗತಿಸಿದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪವಿತ್ರ ಸ್ಥಳದಲ್ಲಿ ಪೂಜೆ ಮತ್ತು ದರ್ಶನದಲ್ಲಿ ಭಾಗವಹಿಸಿದ್ದಾರೆ. ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜನನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು. ಭಾರತದಲ್ಲಿ, ಸಂಪ್ರದಾಯದ ಪ್ರಕಾರ, ರಾಜನನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು. ಭೂತಾನಿನ ರಾಜನ ಮಹಾ ಕುಂಭಕ್ಕೆ ಭೇಟಿ ನೀಡುವುದು ಈ ಭವ್ಯ ಧಾರ್ಮಿಕ ಸಭೆಯ ಜಾಗತಿಕ ಆಧ್ಯಾತ್ಮಿಕ ಮಹತ್ವವನ್ನು ಸೂಚಿಸುತ್ತದೆ.

ಪ್ರಯಾಗರಾಜ್‌: ಭೂತಾನ್‌ನ ರಾಜ ಜಿಗ್ಮೆ ಖೇಸರ್ ನಮ್ಗ್ಯೇಲ್ ವಾಂಗ್‌ಚುಕ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಇಂದು ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಗಂಗಾ ಆರತಿಯಲ್ಲಿ ಭಾಗವಹಿಸಿದರು. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ಸಂಗಮಕ್ಕೆ ರಾಜಮನೆತನದ ಭೇಟಿಯ ವೇಳೆ ಸಾಂಪ್ರದಾಯಿಕ ಆಚರಣೆಗಳು ಮತ್ತು ಪ್ರಾರ್ಥನೆಗಳನ್ನು ಮಾಡಲಾಯಿತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ರಾಜ ವಾಂಗ್‌ಚುಕ್ ಆಧ್ಯಾತ್ಮಿಕ ಸಮಾರಂಭದಲ್ಲಿ ಭಾಗವಹಿಸಿ, ಪ್ರಾರ್ಥನೆ ಸಲ್ಲಿಸಿದರು. ಹಾಗೇ, ವೇದ ಸ್ತುತಿಗಳ ಪಠಣದ ನಡುವೆ ಆರತಿ ಮಾಡಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ