ಮಹಾಕುಂಭ ಮೇಳದ ಅಂತಿಮ ದಿನ: ಶಿವರಾತ್ರಿಯಂದು ಪುಣ್ಯಸ್ನಾನ ಮಾಡಿ ಶಿವನ ಕೃಪೆಗೆ ಪಾತ್ರರಾದ ಜನ

Updated on: Feb 26, 2025 | 9:15 AM

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ 2025 ರ ಮಹಾಕುಂಭ ಅಂತಿಮ ಹಂತಕ್ಕೆ ಬಂದಿದೆ. ಮಹಾಶಿವರಾತ್ರಿಯ ಕೊನೆಯ ಸ್ನಾನ ಮಹೋತ್ಸವದ ಸಮಯದಲ್ಲಿ ಜನಸಂದಣಿಯನ್ನು ನಿರ್ವಹಿಸುವ ಸಲುವಾಗಿ, ಫೆಬ್ರವರಿ 25 ರಿಂದ ಜಾತ್ರೆ ಪ್ರದೇಶ ಮತ್ತು ಪ್ರಯಾಗರಾಜ್‌ನಲ್ಲಿ ವಾಹನ ರಹಿತ ವಲಯವನ್ನು ಜಾರಿಗೆ ತರಲಾಗಿದ್ದು, ಭಕ್ತರು ಯಾವುದೇ ಅಡೆತಡೆಯಿಲ್ಲದೆ ಸ್ನಾನ ಮಾಡಲು ಮತ್ತು ದರ್ಶನ ಪಡೆಯಲು ಅವಕಾಶ ಪಡೆಯಬಹುದು.

ಪ್ರಯಾಗ್​ರಾಜ್​, ಫೆಬ್ರವರಿ 26: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇಂದು ಶಿವರಾತ್ರಿಯಂದು ಅಂತಿಮ ಪುಣ್ಯಸ್ನಾನ ನಡೆಯುತ್ತಿದ್ದು, ಕುಂಭಮೇಳಕ್ಕೆ ತೆರೆ ಬೀಳಲಿದೆ. ಇಂದು ಬೆಳಗ್ಗೆಯಿಂದಲೇ ತ್ರಿವೇಣಿ ಸಂಗಮದಲ್ಲಿ 41 ಲಕ್ಷ ಜನ ಪವಿತ್ರ ಸ್ನಾನ ಮಾಡಿದ್ದಾರೆ.

ಕೊನೆಯ ವಿಶೇಷ ಸ್ನಾನಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಕಾರಣ, ಸಂಜೆ 6 ಗಂಟೆಯಿಂದ ಪ್ರಯಾಗ್‌ರಾಜ್‌ನಾದ್ಯಂತ ವಾಹನ ರಹಿತ ವಲಯವನ್ನು ಜಾರಿಗೆ ತರಲಾಗಿತ್ತು. ನಸಂದಣಿಯ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಆಡಳಿತವು ಈ ನಿರ್ಬಂಧಗಳನ್ನು ವಿಧಿಸಿದೆ. ಆದಾಗ್ಯೂ, ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತಿದೆ.

ಭಾರದ್ವಾಜ್ ಘಾಟ್, ನಾಗವಾಸುಕಿ ಘಾಟ್, ಮೋರಿ ಘಾಟ್, ಕಾಳಿ ಘಾಟ್, ರಾಮ್ ಘಾಟ್ ಮತ್ತು ಹನುಮಾನ್ ಘಾಟ್ ಕಡೆಗೆ ಸಾಗಲು ನಿರ್ದೇಶಿಸಲಾಗಿದೆ. ಅರೈಲ್ ಪ್ರದೇಶದಿಂದ ಬರುವ ಭಕ್ತರು ಸ್ನಾನಕ್ಕೆ ಅರೈಲ್ ಘಾಟ್ ಬಳಸಬೇಕು. ಹಾಲು, ತರಕಾರಿ, ಔಷಧಿಗಳು, ಇಂಧನ ಮತ್ತು ತುರ್ತು ವಾಹನಗಳ ಸಾಗಣೆ ಸೇರಿದಂತೆ ಅಗತ್ಯ ಸೇವೆಗಳ ಮೇಲೆ ಯಾವುದೇ ನಿರ್ಬಂಧಗಳಿಲ್ಲ.

ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಯಂತಹ ಸರ್ಕಾರಿ ಸಿಬ್ಬಂದಿಗೆ ಸಂಚಾರ ನಿರ್ಬಂಧ ಅನ್ವಯವಾಗುವುದಿಲ್ಲ.
ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಭಕ್ತರು ತಮ್ಮ ಹತ್ತಿರದ ಘಾಟ್‌ಗಳಲ್ಲಿ ಸ್ನಾನ ಮಾಡಿ ಸ್ಥಳೀಯ ಶಿವ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಜನರನ್ನು ನಿಯಂತ್ರಿಸಲು, ಜನಸಂದಣಿಯ ಸಾಂದ್ರತೆಯ ಆಧಾರದ ಮೇಲೆ ಪಾಂಟೂನ್ ಸೇತುವೆಗಳನ್ನು ನಿರ್ವಹಿಸಲಾಗುವುದು. ಈ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಗಿದ್ದು ಫೆಬ್ರವರಿ 26 ರಂದು ಕೊನೆಗೊಳ್ಳಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Feb 26, 2025 09:14 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More