ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾಗಲಕೋಟೆಯ ಬಾದಾಮಿಯಲ್ಲೊಂದು ಅಚ್ಚರಿ!
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಹಾಕೂಟೇಶ್ವರ ದೇವಸ್ಥಾನದಲ್ಲಿರುವ ಪುಷ್ಕರಣಿ ಬರದ ನಡುವೆಯೂ ಎಂದಿಗೂ ಬತ್ತದೆ ಹರಿದುಬರುವ ಭಕ್ತರಿಗೆ ಜೀವ ಸೆಲೆಯಾಗಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಚಾಲುಕ್ಯರ ಕಾಲದ ಈ ಪುಷ್ಕರಣಿಯಲ್ಲಿ ಸ್ನಾನ ಮಾಡಿದರೆ ರೋಗ ರುಜಿನಿಗಳು ದೂರವಾಗುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಈ ಕ್ಷೇತ್ರ ಬಿಸಿಲಿನ ಬೇಗೆಯಲ್ಲೂ ಜನರನ್ನು ಸೆಳೆಯುತ್ತಿದೆ.
ಬಾಗಲಕೋಟೆ, ಮೇ 18: ಜಿಲ್ಲೆಯಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ನದಿ, ಕೆರೆ-ಕಟ್ಟೆಗಳು ಬತ್ತಿ ಬರಗಾಲದ ಛಾಯೆ ಆವರಿಸಿದೆ. ಇಂತಹ ಸಂದರ್ಭದಲ್ಲಿ ಬಾದಾಮಿ ತಾಲ್ಲೂಕಿನ ಮಹಾಕೂಟದಲ್ಲಿರುವ ಮಹಾಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪುಷ್ಕರಣಿ ಎಂದಿಗೂ ಬತ್ತದೆ ಭಕ್ತರಿಗೆ ಆಕರ್ಷಣೀಯ ಕೇಂದ್ರವಾಗಿದೆ. ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ಈ ಐತಿಹಾಸಿಕ ಸ್ಥಳದಲ್ಲಿರುವ ಪುಷ್ಕರಣಿಯು ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡಿದ್ದು, ಸುಮಾರು ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ವಿಶೇಷವೆಂದರೆ, ಇಲ್ಲಿಯವರೆಗೂ ಈ ಪುಷ್ಕರಣಿ ಒಮ್ಮೆಯೂ ಬತ್ತಿದ ಉದಾಹರಣೆ ಇಲ್ಲ. ನಿರಂತರವಾಗಿ ನೀರಿನಿಂದ ಕೂಡಿರುವ ಈ ಪವಿತ್ರ ಹೊಂಡದಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಪುಣ್ಯಸ್ನಾನ ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us


