ಬೆಂಗಳೂರು: ಪಾರಿವಾಳ ಹಿಡಿಲು ಹೋಗಿ ವಿದ್ಯುತ್ ಶಾಕ್ಗೆ ಒಳಗಾಗಿದ್ದ ಓರ್ವ ಬಾಲಕ ಚಿಕಿತ್ಸೆ ಫಲಿಸದೆ ಸಾವು
ಮನೆ ಮೇಲೆ ಪಾರಿವಾಳ ಹಿಡಿಯಲು ಸ್ನೇಹಿತನ ಜೊತೆ ಹೋಗಿದ್ದಾಗ ಹೈ ಟೆನ್ಶನ್ ವೈರ್ ಸ್ಪರ್ಶವಾಗಿತ್ತು. ಈ ವೇಳೆ ಇಬ್ಬರು ಬಾಲಕರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದವು. ತೀರ ಕೆಳಕ್ಕೆ ಇರುವ ಹೈಟೆನ್ಶನ್ ಲೈನ್ ಬಗ್ಗೆ ಬೆಸ್ಕಾಂ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ಹೈ ಟೆನ್ಶನ್ ಲೈನ್ ಕರೆಂಟ್ ಶಾಕ್ ಪ್ರಕರಣಕ್ಕೆ ಸಂಬಂಧಿಸಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸುಪ್ರಿತ್ ಸಾವನ್ನಪ್ಪಿದ್ದಾನೆ. ಮೂರು ದಿನದಿಂದ ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದ ಬಾಲಕ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ತಂದೆ ಮಂಜುನಾಥ್, ತಾಯಿ ಪ್ರೇಮ ಅವ್ರ ಒಬ್ಬನೇ ಮಗ ಸುಪ್ರಿತ್ ಮೊನ್ನೆ ಮನೆ ಮೇಲೆ ಪಾರಿವಾಳ ಹಿಡಿಯಲು ಸ್ನೇಹಿತನ ಜೊತೆ ಹೋಗಿದ್ದಾಗ ಹೈ ಟೆನ್ಶನ್ ವೈರ್ ಸ್ಪರ್ಶವಾಗಿತ್ತು. ಈ ವೇಳೆ ಇಬ್ಬರು ಬಾಲಕರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದವು. ತೀರ ಕೆಳಕ್ಕೆ ಇರುವ ಹೈಟೆನ್ಶನ್ ಲೈನ್ ಬಗ್ಗೆ ಬೆಸ್ಕಾಂ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published on: Dec 04, 2022 03:15 PM
Latest Videos
ಆಗ ವೀರಪ್ಪನ್ ಕೇಸ್ನಲ್ಲಿ ಗಿಫ್ಟ್: ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!

