ಮಹಾಲಯ ಅಮಾವಾಸ್ಯೆ: ನಟ ಧ್ರುವ ಸರ್ಜಾ ಅವರಿಂದ ವಿಶೇಷ ಪೂಜೆ

Updated on: Sep 21, 2025 | 2:05 PM

ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅವರು ವಿಶೇಷ ಪೂಜೆ ಮಾಡಿಸಿದ್ದಾರೆ. ಕೋಲಾರ ತಾಲ್ಲೂಕು ಕೋರಗೊಂಡನಹಳ್ಳಿಯಲ್ಲಿ ಪೂಜೆ ಮತ್ತು ರುದ್ರಾಭಿಷೇಕ ಮಾಡಿಸಲಾಗಿದೆ. ಧ್ರುವ ಜತೆ ಪೂರ್ವ ವಲಯ ಡಿಸಿಪಿ ಡಿ. ದೇವರಾಜ್ ಕೂಡ ಭಾಗಿಯಾಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಕೋಲಾರ: ಮಹಾಲಯ ಅಮಾವಾಸ್ಯೆ (Mahalaya Amavasya) ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ಅವರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ. ಕೋಲಾರ ತಾಲ್ಲೂಕು ಕೋರಗೊಂಡನಹಳ್ಳಿಯಲ್ಲಿ ಪೂಜೆ ಹಾಗೂ ರುದ್ರಾಭಿಷೇಕ ಮಾಡಿಸಲಾಗಿದೆ. ಪುರಾತನ ಇತಿಹಾಸ ಹೊಂದಿರುವ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯ ಇದು. ಕಾಶಿ ವಿಶ್ವೇಶ್ವರ ಹಾಗೂ ಕಾಲ ಭೈರವನಿಗೆ ವಿಶೇಷ ಅಭಿಷೇಕ ಮಾಡಿಸಿದ್ದಾರೆ. ಈ ವೇಳೆ ಧ್ರುವ ಸರ್ಜಾ (Dhruva Sarja) ಜೊತೆ ಪೂರ್ವ ವಲಯ ಡಿಸಿಪಿ ಡಿ. ದೇವರಾಜ್ ಸಹ ಭಾಗಿಯಾಗಿದ್ದಾರೆ. ‘ಕೆಡಿ’ ಸಿನಿಮಾದ ಕೆಲಸಗಳಲ್ಲಿ ಧ್ರುವ ಸರ್ಜಾ ಅವರು ತೊಡಗಿಕೊಂಡಿದ್ದಾರೆ. ಅದು ನಡುವೆ ಅವರು ಕುಟುಂಬಕ್ಕೆ ಸಮಯ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More