ವಾಟ್ ಎ ಶಾಟ್ ಸಮಿತ್..! ದ್ರಾವಿಡ್ ಪುತ್ರ ಸಿಡಿಸಿದ ಫೈನ್ ಲೆಗ್ ಸಿಕ್ಸರ್ ನೋಡಿ

Maharaja Trophy 2024 Samit Dravid: ನಾಯಕ ಕರುಣ್ ನಾಯರ್​ಗೆ ಉತ್ತಮ ಸಾಥ್ ನೀಡುತ್ತಿದ್ದ ಸಮಿತ್ ಬೌಲ್ಡ್ ಆಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಸಮಿತ್ ತಮ್ಮ ಇನ್ನಿಂಗ್ಸ್​ನಲ್ಲಿ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 16 ರನ್ ಸಿಡಿಸಿದರು. ಅದರಲ್ಲೂ ಸಮಿತ್ ಸಿಡಿಸಿದ ಏಕೈಕ ಸಿಕ್ಸರ್ ಮೈದಾನದಲ್ಲಿ ನೆರೆದಿದ್ದವರನ್ನು ರೋಮಾಂಚನಗೊಳಿಸಿತು.

ವಾಟ್ ಎ ಶಾಟ್ ಸಮಿತ್..! ದ್ರಾವಿಡ್ ಪುತ್ರ ಸಿಡಿಸಿದ ಫೈನ್ ಲೆಗ್ ಸಿಕ್ಸರ್ ನೋಡಿ
|

Updated on: Aug 19, 2024 | 10:46 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೈಸೂರು ವಾರಿಯರ್ಸ್​ ಹಾಗೂ ಮಂಗಳೂರು ಡ್ರ್ಯಾಗನ್ಸ್ ನಡುವಿನ ಪಂದ್ಯದಲ್ಲಿ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಮತ್ತೊಮ್ಮೆ ವಿಫಲರಾದ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೇವಲ 16 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ನಾಯಕ ಕರುಣ್ ನಾಯರ್​ಗೆ ಉತ್ತಮ ಸಾಥ್ ನೀಡುತ್ತಿದ್ದ ಸಮಿತ್ ಬೌಲ್ಡ್ ಆಗುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಸಮಿತ್ ತಮ್ಮ ಇನ್ನಿಂಗ್ಸ್​ನಲ್ಲಿ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 16 ರನ್ ಸಿಡಿಸಿದರು. ಅದರಲ್ಲೂ ಸಮಿತ್ ಸಿಡಿಸಿದ ಏಕೈಕ ಸಿಕ್ಸರ್ ಮೈದಾನದಲ್ಲಿ ನೆರೆದಿದ್ದವರನ್ನು ರೋಮಾಂಚನಗೊಳಿಸಿತು.

ನಿಶ್ಚಿತ್ ರಾವ್ ಬೌಲ್ ಮಾಡಿದ 12ನೇ ಓವರ್​ನ ಮೊದಲ ಎಸೆತವನ್ನು ಸಮಿತ್ ಫೈನ್ ಲೆಗ್​ ಮೇಲೆ ಭರ್ಜರಿ ಸಿಕ್ಸರ್ ಸಿಡಿಸಿದರು. ಸಮಿತ್ ಅವರ ಈ ಶಾಟ್ ನೋಡಿದ ಪ್ರೇಕ್ಷಕರು ಅಚ್ಚರಿ ವ್ಯಕ್ತಪಡಿಸಿದಲ್ಲದೆ ಮೈದಾನದಲ್ಲಿ ಹುಚ್ಚೆದ್ದು ಕುಣಿದರು. ಆ ನಂತರವೂ ಸಮಿತ್ ಅವರಿಂದ ಇದೇ ರೀತಿಯ ಬ್ಯಾಟಿಂಗ್ ನಿರೀಕ್ಷೆಸಲಾಗುತ್ತಿತ್ತು. ಆದರೆ ಸಮಿತ್ ಅದೇ ಓವರ್​ನ ಮೂರನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್‌ ಸೇರಿಕೊಂಡರು.

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ… ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ತಂಡದ ಪರ ನಾಯಕ ಕರುಣ್ ನಾಯರ್ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿದ ನಾಯರ್ 13 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್​ಗಳ ನೆರವಿನಿಂದ 124 ರನ್ ಚಚ್ಚಿದರು. ಇವರ ಈ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಮೈಸೂರು ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿದೆ.

Follow us
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು