ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

Updated on: Mar 16, 2025 | 1:12 PM

ವೇಗವಾಗಿ ಬಂದ ಕಾರು ಹತ್ತಾರು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಚಾಲಕನಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಕಾರು ಸರಣಿ ಅಪಘಾತ ಮಾಡಿದೆ. ಬೆಳಗಿನ ಜಾವ ಸಂಭವಿಸಿದ ಈ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿದ್ದಾನೆ. ಧೀರಜ್ ಪಾಟೀಲ್ (55) ತಮ್ಮ ಮೋರಿಸ್ ಗ್ಯಾರೇಜ್ ವಿಂಡ್ಸರ್ ಕಾರನ್ನು ಚಾಲನೆ ಮಾಡುತ್ತಿದ್ದಾಗ ಫ್ಲೈಓವರ್ ಬಳಿ ನಿಯಂತ್ರಣ ಕಳೆದುಕೊಂಡು ಆಟೋರಿಕ್ಷಾ, ಕಾರು, ದ್ವಿಚಕ್ರ ವಾಹನ ಮತ್ತು ಇತರ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ.

ಮಹಾರಾಷ್ಟ್ರ, ಮಾರ್ಚ್​ 16: ವೇಗವಾಗಿ ಬಂದ ಕಾರು ಹತ್ತಾರು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಚಾಲಕನಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಕಾರು ಸರಣಿ ಅಪಘಾತ ಮಾಡಿದೆ. ಬೆಳಗಿನ ಜಾವ ಸಂಭವಿಸಿದ ಈ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿದ್ದಾರೆ. ಧೀರಜ್ ಪಾಟೀಲ್ (55) ತಮ್ಮ ಮೋರಿಸ್ ಗ್ಯಾರೇಜ್ ವಿಂಡ್ಸರ್ ಕಾರನ್ನು ಚಾಲನೆ ಮಾಡುತ್ತಿದ್ದಾಗ ಫ್ಲೈಓವರ್ ಬಳಿ ನಿಯಂತ್ರಣ ಕಳೆದುಕೊಂಡು ಆಟೋರಿಕ್ಷಾ, ಕಾರು, ದ್ವಿಚಕ್ರ ವಾಹನ ಮತ್ತು ಇತರ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 16, 2025 01:12 PM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More