ಮಹಾರಾಷ್ಟ್ರದ ಸಮುದ್ರದಲ್ಲಿ ಮೀನುಗಾರರನ್ನು ಕೊಂದು, ಬೋಟ್​ಗೆ ಬೆಂಕಿ; ವಿಡಿಯೋ ಇಲ್ಲಿದೆ

Updated on: Oct 30, 2024 | 5:08 PM

ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ತೀವ್ರ ವಾಗ್ವಾದದ ನಂತರ ಮಾರಾಮಾರಿ ನಡೆದಿದ್ದು, ದೈಹಿಕ ಹಲ್ಲೆ ಸೇರಿದಂತೆ ಮೀನುಗಾರರ ಸಾವಿಗೆ ಕಾರಣವಾಯಿತು. ಮೃತರನ್ನು ತಾಂಡೇಲ್ ರವೀಂದ್ರ ನಾಟೇಕರ್ ಎಂದು ಗುರುತಿಸಲಾಗಿದೆ. ಹತ್ತಿರದ ದೋಣಿಗಳು ಮೀನುಗಾರನನ್ನು ಉಳಿಸಲು ಪ್ರಯತ್ನಿಸಿದವು. ಆದರೆ ಆತ ಸಾವನ್ನಪ್ಪಿದನು. ಈ ಘಟನೆಯಲ್ಲಿ 1 ಕೋಟಿಗೂ ಹೆಚ್ಚು ಮೌಲ್ಯದ ಬೋಟ್ ಕೂಡ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಮೀನುಗಾರನನ್ನು ಹತ್ಯೆಗೈದು ಬೋಟ್​ಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಮೀನುಗಾರರ ನಡುವೆ ವಾಗ್ವಾದದ ನಂತರ ಕೊಲೆ ನಡೆದಿದೆ ಎನ್ನಲಾಗಿದೆ. ದೋಣಿಯಲ್ಲಿದ್ದ ಮೀನುಗಾರರು ತಾಂಡೇಲ್ ಅನ್ನು ಕೊಂದು ನಂತರ ದೋಣಿಗೆ ಡೀಸೆಲ್ ಹಾಕಿ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಅಕ್ಟೋಬರ್ 28ರಂದು ಸಿಂಧುದುರ್ಗದ ದೇವಗಢದ ಕುಂಕೇಶ್ವರ ಬಳಿಯ ಸಮುದ್ರದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More