ಹೆಂಡ್ತಿ ಕೊಂದು ಸೂಟ್​ಕೇಸ್​ನಲ್ಲಿ ಪ್ಯಾಕ್: ಬೆಂಗಳೂರಿನಲ್ಲಿ ಪಾಪಿ ಪತಿಯ ಬೆಚ್ಚಿಬೀಳಿಸೋ ಕೃತ್ಯ

Updated on: Mar 27, 2025 | 9:53 PM

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ಬೆಳಕಿಗೆ ಬಂದಿದೆ. ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯಲ್ಲಿ ಪಾಪಿ ಪತಿರಾಯ ಪತ್ನಿಯ ತುಂಡರಿಸಿ ಸೂಟ್ ಕೇಸ್‌ಗೆ ತುಂಬಿದ್ದಾನೆ. ಬಳಿಕ ಮಹಾರಾಷ್ಟ್ರದಲ್ಲಿರುವ ಪತ್ನಿಯ ಪೋಷಕರಿಗೆ ಫೋನ್‌ ಮಾಡಿ ವಿಷಯ ತಿಳಿಸಿದ್ದಾನೆ. ದೊಡ್ಡ ಕಮ್ಮನಹಳ್ಳಿಯ ಮನೆಯಲ್ಲಿ ಮಹಾರಾಷ್ಟ್ರ ಮೂಲದ ರಾಕೇಶ್, ಗೌರಿ ಅನಿಲ್ ಸಾಂಬೆಕರ್ ವಾಸಿಸುತ್ತಿದ್ದರು.

ಬೆಂಗಳೂರು, (ಮಾರ್ಚ್​ 27): ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ಬೆಳಕಿಗೆ ಬಂದಿದೆ. ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯಲ್ಲಿ ಪಾಪಿ ಪತಿರಾಯ ಪತ್ನಿಯ ತುಂಡರಿಸಿ ಸೂಟ್ ಕೇಸ್‌ಗೆ ತುಂಬಿದ್ದಾನೆ. ಬಳಿಕ ಮಹಾರಾಷ್ಟ್ರದಲ್ಲಿರುವ ಪತ್ನಿಯ ಪೋಷಕರಿಗೆ ಫೋನ್‌ ಮಾಡಿ ವಿಷಯ ತಿಳಿಸಿದ್ದಾನೆ. ದೊಡ್ಡ ಕಮ್ಮನಹಳ್ಳಿಯ ಮನೆಯಲ್ಲಿ ಮಹಾರಾಷ್ಟ್ರ ಮೂಲದ ರಾಕೇಶ್, ಗೌರಿ ಅನಿಲ್ ಸಾಂಬೆಕರ್ ವಾಸಿಸುತ್ತಿದ್ದರು. ಗಂಡ, ಹೆಂಡತಿ ಮಧ್ಯೆ ಜಗಳವಾಗಿ ಪತ್ನಿಯನ್ನು ರಾಕೇಶ್ ತುಂಡು, ತುಂಡಾಗಿ ಕತ್ತರಿಸಿದ್ದಾನೆ ಎಂದು ತಿಳಿದುಬಂದಿದೆ. ಭಯಾನಕ ಕೃತ್ಯ ಎಸಗಿರುವ ಪತಿ, ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಫೋನ್‌ ಮಾಡಿ ನಡೆದಿರೋ ಘಟನೆಯನ್ನು ವಿವರಿಸಿದ್ದಾನೆ. ಗೌರಿ ಮನೆಯವರು ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರು ಕೂಡಲೇ ಬೆಂಗಳೂರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪತ್ನಿಯನ್ನ ತುಂಡರಿಸಿ ಸೂಟ್ ಕೇಸ್​ನಲ್ಲಿ ತುಂಬಿಟ್ಟ ಪತಿ

Published on: Mar 27, 2025 09:44 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More