ಮಹಾರಾಷ್ಟ್ರದಲ್ಲಿ ಮಳೆಯಬ್ಬರ: ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ

Edited By:

Updated on: Jul 24, 2026 | 5:03 PM

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ 8 ಕೆಳಹಂತದ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ, ದೂದಗಂಗಾ, ವೇದಗಂಗಾ ನದಿಗಳು ಮೈದುಂಬಿ ಹರಿಯುತ್ತಿದ್ದು, 90,000 ಕ್ಯೂಸೆಕ್ ಒಳಹರಿವು ಪ್ರವಾಹ ಭೀತಿ ಸೃಷ್ಟಿಸಿದೆ. ರೈತರಲ್ಲಿ ಆತಂಕ ಮೂಡಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ.

ಚಿಕ್ಕೋಡಿ, ಜುಲೈ 24: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಕರ್ನಾಟಕದ ಗಡಿ ಪ್ರದೇಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಮಳೆಯಿಲ್ಲದಿದ್ದರೂ, ಮಹಾರಾಷ್ಟ್ರದ ಮಳೆಯಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಎಂಟು ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.  ಕೃಷ್ಣಾ ನದಿಗೆ ಸುಮಾರು 90,000 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ದೂದಗಂಗಾ ಮತ್ತು ವೇದಗಂಗಾ ನದಿಗಳು ಕೂಡ ಮೈದುಂಬಿ ಹರಿಯುತ್ತಿವೆ. ಕಲ್ಲೋಳ ಬ್ಯಾರೇಜ್ ಬಳಿಯ ದತ್ತ ಮಂದಿರವೂ ಮುಳುಗಡೆಯಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆ ಕಂಡಿರುವುದರಿಂದ ಕೃಷಿ ಭೂಮಿ ಜಲಾವೃತವಾಗುವ ಭೀತಿ ರೈತರಲ್ಲಿ ಆತಂಕ ಮೂಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us