ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸಂಪರ್ಕ ಸೇತುವೆಗಳು ಜಲಾವೃತ
Belagavi News: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ದೂದಗಂಗಾ ಮತ್ತು ವೇದಗಂಗಾ ನದಿಗಳ ಮೂರು ಪ್ರಮುಖ ಸಂಪರ್ಕ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ನದಿಗಳಿಗೆ ಯಾರೂ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಜುಲೈ 05: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟ ಹಿನ್ನೆಲೆ ನಿಪ್ಪಾಣಿ ತಾಲೂಕಿನಲ್ಲಿ ಮೂರು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾರವಾಡ-ಕನ್ನೂರ, ಬೋಜವಾಡಿ-ಗಜವರವಾಡಿ ಸೇತುವೆಗಳೂ ಸಂಪೂರ್ಣ ಜಲಾವೃತವಾಗಿವೆ. ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ನದಿಗಳಿಗೆ ಯಾರೂ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 05, 2026 10:20 AM
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

