Mahashivratri: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತಾದಿಗಳ ಪಾದ ತೊಳೆದು, ಎಣ್ಣೆ ಹಚ್ಚಿ ಮಸಾಜ್ ಮಾಡಿದ ವಿನಯ್ ಗುರೂಜಿ
ಚಿಕ್ಕಮಗಳೂರು ಜಿಲ್ಲೆಯಿಂದ ಅನೇಕ ಭಕ್ತರು ತಂಡೋಪತಂಡವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದರು. ಪಾದಯಾತ್ರಿಗಳು ನಿನ್ನೆ (ಮಾ.04)ರ ರಾತ್ರಿ ಮೂಡಿಗೆರೆ ತಾಲೂಕಿನ ನೀರುಗಂಡಿಯಲ್ಲಿ ವಾಸವಾಗಿದ್ದರು. ಈ ವೇಳೆ ಅವಧೂತ ವಿನಯ್ ಗುರೂಜಿ ಪಾದಯಾತ್ರಿಗಳ ಕಾಲು ತೊಳೆದು, ಪುಷ್ಪ ಹಾಕಿ ಪೂಜಿಸಿದರು.
ಚಿಕ್ಕಮಗಳೂರು, ಮಾರ್ಚ್ 05: ಮಹಾಶಿವರಾತ್ರಿ (Mahashivratri) ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಮತ್ತು ತುಮಕೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಡುತ್ತಾರೆ. ಶಿವರಾತ್ರಿ ದಿನದಂದು ಶ್ರೀ ಮಂಜುನಾಥನ ದರ್ಶನ ಪಡೆಯುತ್ತಾರೆ. ಚಿಕ್ಕಮಗಳೂರು ಜಿಲ್ಲೆಯಿಂದಲೂ ಅನೇಕ ಭಕ್ತರು ತಂಡೋಪತಂಡವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಪಾದಯಾತ್ರಿಗಳು ನಿನ್ನೆ (ಮಾ.04)ರ ರಾತ್ರಿ ಮೂಡಿಗೆರೆ (Mudigere) ತಾಲೂಕಿನ ನೀರುಗಂಡಿಯಲ್ಲಿ ವಾಸವಾಗಿದ್ದರು. ಈ ವೇಳೆ ಅವಧೂತ ವಿನಯ್ ಗುರೂಜಿ ಪಾದಯಾತ್ರಿಗಳ ಕಾಲು ತೊಳೆದು, ಪುಷ್ಪ ಹಾಕಿ ಪೂಜಿಸಿದರು. ಬಳಿಕ ಎಣ್ಣೆ ಹಚ್ಚಿ ಮಸಾಜ್ ಮಾಡಿದರು. ಅವಧೂತ ವಿನಯ್ ಗುರೂಜಿ (Vinay Guruji) ಅವರಿಗೆ ಶಾಸಕಿ ನಯನ ಮೋಟಮ್ಮ ಸಾಥ್ ನೀಡಿದರು. ಮೂಡಿಗೆರೆ ತಾಲೂಕಿನ ಸಾಮಾಜಿಕ ಸೇವಾ ಸಮಿತಿ ಪ್ರತಿ ವರ್ಷ ಧರ್ಮಸ್ಥಳ ಪಾದಯಾತ್ರಿಗಳಿಗೆ ಊಟ-ವಸತಿಗೆ ಸೌಲಭ್ಯ ಕಲ್ಪಿಸಿದೆ.
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

