ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ
ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯ ಒಂದು ಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಎನ್ಜಿಸಿ ತೈಲ ಬಾವಿಯಿಂದ ಭಾರಿ ಅನಿಲ ಸೋರಿಕೆಯಾಗಿ ವ್ಯಾಪಕ ಭೀತಿ ಉಂಟಾಗಿದೆ. ಕೊನಸೀಮಾದ ರಜೋಲ್ ಪ್ರದೇಶದ ಇರುಸುಮಂಡ ಗ್ರಾಮದಲ್ಲಿ ಈ ತೈಲ ಬಾವಿ ಇದೆ. ಈ ಬಾವಿಯಲ್ಲಿ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ನಂತರ ವರ್ಕ್ಓವರ್ ರಿಗ್ ಬಳಸಿ ದುರಸ್ತಿ ಕಾರ್ಯಗಳು ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ. ಸೋರಿಕೆಯಾದ ಅನಿಲಕ್ಕೆ ಶೀಘ್ರದಲ್ಲೇ ಬೆಂಕಿ ಹೊತ್ತಿಕೊಂಡಿತು.
ಕೊನಸೀಮಾ, ಜನವರಿ 5: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಪೈಪ್ಲೈನ್ನಿಂದ ಭಾರಿ ಅನಿಲ ಸೋರಿಕೆಯಾಗಿದ್ದು, ಆ ಗ್ಯಾಸ್ಗೆ ಬೆಂಕಿ (Fire Accident) ಹೊತ್ತಿಕೊಂಡಿದೆ. ಇದರಿಂದಾಗಿ ಇಡೀ ಹಳ್ಳಿಯಲ್ಲಿ ಬೆಂಕಿಯ ದಟ್ಟ ಹೊಗೆ ತುಂಬಿದೆ. ಮಾಲಿಕಿಪುರಂ ಮಂಡಲದ ಇರುಸಮಂಡದ ಬಳಿ ಅನಿಲ ಸೋರಿಕೆ ಮತ್ತು ಬೆಂಕಿಯಿಂದಾಗಿ ಇಡೀ ಗ್ರಾಮವೇ ಹೊಗೆಯಿಂದ ಆವೃತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಅಧಿಕಾರಿಗಳು ಆ ಗ್ರಾಮದ ಜನರನ್ನು ಅವರ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾರೂ ಗಾಯಗೊಂಡಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು

