ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ

Updated on: Feb 22, 2026 | 2:59 PM

ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ ಪೆಡಿಗ್ರಿ ಗೋದಾಮು, ಎಸಿ ಸಾಮಗ್ರಿಗಳನ್ನು ಸಂಗ್ರಹಿಸುವ ಎಸಿ ಗೋದಾಮುಗಳು ಸೇರಿವೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಶೇಷವಾಗಿ, ಅಗ್ನಿ ಅವಘಡ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಎಚ್‌ಪಿ ಗ್ಯಾಸ್ ಸಿಲಿಂಡರ್ ಸಂಗ್ರಹವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವುಗಳನ್ನು ತಕ್ಷಣವೇ ಸ್ಥಳಾಂತರಿಸಲಾಗಿದೆ.

ನೆಲಮಂಗಲ, ಫೆಬ್ರವರಿ 22: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಒಂದು ಪ್ರಮುಖ ವೇರ್‌ಹೌಸ್ ಸಂಕೀರ್ಣದಲ್ಲಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಿಂದ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಭೀಕರ ಬೆಂಕಿ ಕಾಣಿಸಿಕೊಂಡಿದೆ.

ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ ಪೆಡಿಗ್ರಿ ಗೋದಾಮು, ಎಸಿ ಸಾಮಗ್ರಿಗಳನ್ನು ಸಂಗ್ರಹಿಸುವ ಎಸಿ ಗೋದಾಮುಗಳು ಸೇರಿವೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಶೇಷವಾಗಿ, ಅಗ್ನಿ ಅವಘಡ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಎಚ್‌ಪಿ ಗ್ಯಾಸ್ ಸಿಲಿಂಡರ್ ಸಂಗ್ರಹವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅವುಗಳನ್ನು ತಕ್ಷಣವೇ ಸ್ಥಳಾಂತರಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More