AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

ರಮೇಶ್ ಬಿ. ಜವಳಗೇರಾ
|

Updated on: Jan 15, 2026 | 3:40 PM

Share

ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ.

ಬೆಂಗಳೂರು, (ಜನವರಿ 15): ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವ ಲಿಂಗವನ್ನು ಸ್ಪರ್ಶಿಸಲಿದ್ದು, ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಸೂರ್ಯನ ಕಿರಣಗಳು ನಂದಿಯ ತಲೆಯ ಮಧ್ಯಭಾಗದ ಮೂಲಕ ಹಾದು ಗುಹೆಯೊಳಗಿರುವ ಶಿವಲಿಂಗದ ತಳಭಾಗವನ್ನು ಸ್ಪರ್ಶಿಸುವ ನೇರಪ್ರಸಾರ ಇಲ್ಲಿದೆ ನೋಡಿ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More