Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್​ ಗೌಡ’ ಸುದ್ದಿಗೋಷ್ಠಿಯಲ್ಲಿ ಪತಿ ಕೋಟಿ ರಾಮು ನೆನೆದು ಕಣ್ಣೀರು ಹಾಕಿದ ಮಾಲಾಶ್ರೀ

‘ಅರ್ಜುನ್​ ಗೌಡ’ ಸುದ್ದಿಗೋಷ್ಠಿಯಲ್ಲಿ ಪತಿ ಕೋಟಿ ರಾಮು ನೆನೆದು ಕಣ್ಣೀರು ಹಾಕಿದ ಮಾಲಾಶ್ರೀ

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 28, 2021 | 8:38 PM

ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ ನಾಯಕ. ಈ ಸಿನಿಮಾದ ಪತ್ರಿಕಾಗೋಷ್ಠಿ ಇಂದು (ಡಿಸೆಂಬರ್ 28) ನಡೆದಿದೆ. ಸುದ್ದಿಗೋಷ್ಠಿ ವೇಳೆ ಮಾಲಾಶ್ರೀ ಕಣ್ಣೀರು ಹಾಕಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ ರಾಮು (Koti Ramu) ಅವರ ಹೆಸರಿನ ಜತೆ ‘ಕೋಟಿ’ ಎಂಬ ವಿಶೇಷಣ ಕೂಡ ಸೇರಿಕೊಂಡಿತ್ತು. ಸಿನಿಮಾ ಮೇಲೆ ಅವರಿಗೆ ಅಷ್ಟರಮಟ್ಟಿಗೆ ಪ್ರೀತಿ ಇತ್ತು. ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು ನಿರ್ಮಿಸಿದ ಸಾಹಸ ಪ್ರಧಾನ ಚಿತ್ರಗಳು ಜನಮನ ಗೆದ್ದಿದ್ದು ಈಗ ಇತಿಹಾಸ. ಕೊರೊನಾದಿಂದ ಈ ವರ್ಷ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ರಾಮು ನಿಧನದಿಂದ ಅವರ ಪತ್ನಿ ಮಾಲಾಶ್ರೀ (Malashree) ಕಂಗೆಟ್ಟಿದ್ದರು. ಈಗ ಪತಿಯ ಕನಸನ್ನು ನನಸು ಮಾಡಲು ಅವರು ಮುಂದೆ ಬಂದಿದ್ದಾರೆ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ (Arjun Gowda Movie) ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ (Prajwal Devaraj) ನಾಯಕ. ಈ ಸಿನಿಮಾದ ಪತ್ರಿಕಾಗೋಷ್ಠಿ ಇಂದು (ಡಿಸೆಂಬರ್ 28) ನಡೆದಿದೆ. ಸುದ್ದಿಗೋಷ್ಠಿ ವೇಳೆ ಮಾಲಾಶ್ರೀ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಪತಿ ಕೋಟಿ ರಾಮು ನಿರ್ಮಾಣದ ಕೊನೇ ಚಿತ್ರ ರಿಲೀಸ್​ ಮಾಡಲಿರುವ ಮಾಲಾಶ್ರೀ; ಡಿ.31ಕ್ಕೆ ‘ಅರ್ಜುನ್​ ಗೌಡ’