‘ಕಲ್ ಗುಂಡಿಗೆ ಗಂಡು’ ಅಂಬರೀಶ್ ಹೇಳಿದ್ದ ಮಾತು ನೆನಪಿಸಿಕೊಂಡ ಮಾಲಾಶ್ರೀ

Updated on: Dec 23, 2023 | 11:20 PM

Malshree: ಹಿರಿಯ ನಟಿ ಮಾಲಾಶ್ರೀ ಪುತ್ರಿ, ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಮಂಡ್ಯದಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಅಂಬರೀಶ್ ಅವರನ್ನು ಮಾಲಾಶ್ರೀ ನೆನಪು ಮಾಡಿಕೊಂಡರು.

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ಹಿರಿಯ ನಟಿ ಮಾಲಾಶ್ರೀ ಪುತ್ರಿ ರಾಧನಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಮಂಡ್ಯದಲ್ಲಿ ಅದ್ಧೂರಿಯಾಗಿ ನೆಡೆದಿದೆ. ಕಾರ್ಯಕ್ರಮದಲ್ಲಿ ‘ಕಾಟೇರ’ ಸಿನಿಮಾದ ಜೊತೆಗೆ ಅಂಬರೀಶ್ ಬಗ್ಗೆಯೂ ಹಲವು ಗಣ್ಯರು ಮಾತನಾಡಿದರು. ಪುತ್ರಿಯನ್ನು ತಮ್ಮ ವೃತ್ತಿಗೆ ಪರಿಚಯಿಸುತ್ತಿರುವ ಖುಷಿಯಲ್ಲಿ ವೇದಿಕೆ ಏರಿದ ನಟಿ ಮಾಲಾಶ್ರೀ, ತಾವು ಅಂಬರೀಶ್ ಜೊತೆ ನಟಿಸುತ್ತಿದ್ದ ದಿನಗಳನ್ನು ನೆನಪು ಮಾಡಿಕೊಂಡರು. ಅಂಬರೀಶ್ ಬೈಯ್ದು ಹೇಳುತ್ತಿದ್ದ ಬುದ್ಧಿಮಾತುಗಳನ್ನು ನೆನಪು ಮಾಡಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More