‘ಅಂಬರೀಷ್ ಜೊತೆ ಸುಮಲತಾ ನೋಡಿದ್ರೆ ನಂಗೆ ಹೊಟ್ಟೆಕಿಚ್ಚು ಆಗ್ತಿತ್ತು’: ಮಾಲಾಶ್ರೀ

Updated on: Dec 24, 2023 | 8:42 AM

ಮಂಡ್ಯದಲ್ಲಿ ‘ಕಾಟೇರ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಬಹಳ ಗ್ರ್ಯಾಂಡ್​ ಆಗಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಮಾಲಾಶ್ರೀ, ಸುಮಲತಾ ಅಂಬರೀಷ್​, ಅಭಿಷೇಕ್​ ಅಂಬರೀಷ್​ ಮುಂತಾದವರು ಭಾಗಿಯಾದರು. ವೇದಿಕೆಯಲ್ಲಿ ಮಾತನಾಡಿದ ಮಾಲಾಶ್ರೀ ಅವರು ಹಳೆಯ ದಿನಗಳನ್ನು ನೆನಪು ಮಾಡಿಕೊಂಡರು.

ದರ್ಶನ್​ ನಟನೆಯ ‘ಕಾಟೇರ’ ಸಿನಿಮಾದಲ್ಲಿ ಮಾಲಾಶ್ರೀ (Malashree) ಅವರ ಪುತ್ರಿ ರಾಧನಾ ರಾಮ್​ ನಾಯಕಿ ಆಗಿದ್ದಾರೆ. ಇದು ಅವರ ಮೊದಲ ಸಿನಿಮಾ. ಡಿಸೆಂಬರ್​ 29ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಇತ್ತೀಚೆಗೆ ಮಂಡ್ಯದಲ್ಲಿ ಈ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಇವೆಂಟ್​ಗೆ ಸುಮಲತಾ ಅಂಬರೀಷ್​ (Sumalatha Ambareesh), ಅಭಿಷೇಕ್​ ಅಂಬರೀಷ್​ ಮುಂತಾದವರು ಹಾಜರಿ ಹಾಕಿದ್ದರು. ವೇದಿಕೆಯಲ್ಲಿ ನಟಿ ಮಾಲಾಶ್ರೀ ಮಾತನಾಡಿದರು. ‘ನಾನು ಸುಮಲತಾಗೆ ದೊಡ್ಡ ಅಭಿಮಾನಿ. ನಮ್ಮ ಸಿನಿಮಾದ ಶೂಟಿಂಗ್​ ಲೊಕೇಷನ್​ಗೆ ಅಂಬರೀಷ್​ ಜೊತೆ ಸುಮಲತಾ ಬಂದರೆ ನನಗೆ ಹೊಟ್ಟೆಕಿಚ್ಚು ಆಗುತ್ತಿತ್ತು. ಅಂಬರೀಷ್​ಗೆ ನಾನು ಹೀರೋಯಿನ್​ ಆಗಿದ್ದರೂ ಕೂಡ ಸುಮಲತಾ ಅವರೇ ಅಂಬರೀಷ್​ಗೆ ಸೂಪರ್​ ಜೋಡಿ’ ಎಂದರು ಮಾಲಾಶ್ರೀ. ಮೊದಲ ಸಿನಿಮಾದಲ್ಲೇ ತಮ್ಮ ಮಗಳು ದರ್ಶನ್​ ಜೊತೆ ನಟಿಸಿದ್ದಕ್ಕೆ ಮಾಲಾಶ್ರೀ ಸಂಸತ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More