ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​

ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
| Updated By: ಮದನ್​ ಕುಮಾರ್​

Updated on: Jul 02, 2024 | 10:53 PM

‘ರಾಬರ್ಟ್​’ ಸಿನಿಮಾದಲ್ಲಿ ನಿರ್ದೇಶಕ ತರುಣ್​ ಸುಧೀರ್​ ಮತ್ತು ನಟಿ ಸೋನಲ್​ ಮಾಂಥೆರೋ ಅವರು ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದಿತ್ತು. ಈ ವಿಷಯದ ಬಗ್ಗೆ ತರುಣ್​ ಅವರ ತಾಯಿ ಮಾಲತಿ ಸುಧೀರ್​ ಅವರು ಮಾತನಾಡಿದ್ದಾರೆ. ಮಗನ ಮದುವೆ ಕುರಿತ ಕೇಳಿಬಂದ ವಿಷಯಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ.

ಖ್ಯಾತ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಅವರು ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಮಾಹಿತಿ ಇದೆ. ಅವರ ಮದುವೆ ಕುರಿತಂತೆ ಕೆಲವು ದಿನಗಳಿಂದ ಸುದ್ದಿ ಹಬ್ಬಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ತರುಣ್​ ತಾಯಿ ಮಾಲತಿ ಸುಧೀರ್​ ಮಾತನಾಡಿದ್ದಾರೆ. ನಟಿ ಸೋನಲ್​ ಮಾಂತೆರೋ (Sonal Monteiro) ಜೊತೆ ತರುಣ್​ ಸುಧೀರ್​ ಅವರು ಮದುವೆ ಆಗಲಿದ್ದಾರೆ ಎಂಬ ಮಾಹಿತಿ ಹರಿದಾಡಿದೆ. ‘ಮದುವೆ ವಿಚಾರ ಇನ್ನೂ ಖಚಿತ ಆಗಿಲ್ಲ. ಖಚಿತ ಆದ ತಕ್ಷಣ ತರುಣ್​ ಎಲ್ಲರನ್ನೂ ಕರೆಯುತ್ತಾನೆ. ಹುಡುಗಿ ಹುಡುಕುತ್ತಿದ್ದೇವೆ’ ಎಂದು ಮಾಲತಿ ಸುಧೀರ್​ ಹೇಳಿದ್ದಾರೆ. ಸೋನಲ್​ ಹೆಸರು ಪ್ರಸ್ತಾಪಿಸಿದ್ದಕ್ಕೆ ‘ಇನ್ನೂ ಕನ್ಫರ್ಮ್​ ಆಗಿಲ್ಲ. ಈಗ ಆಷಾಡ ಬಂತಲ್ಲ. ಆ ಬಳಿಕ ಒಂದು ದಿನದಲ್ಲಿ ಮದುವೆ ಆಗಿಬಿಡುತ್ತದೆ. ಅವನಿಗೆ ಇನ್ನೂ ಟೈಮ್ ಕೂಡಿ ಬಂದಿಲ್ಲ. ಆಗಸ್ಟ್ 4, 5, 6ಕ್ಕೆ ದಿನಾಂಕ ಫಿಕ್ಸ್​ ಆಗಿದೆ ಎಂಬುದು ಸುಳ್ಳು. ತರುಣ್​ ಯಾರನ್ನು ಬೇಕಾದರೂ ಕರೆದುಕೊಂಡು ಬಂದರೂ ನಾವು ಮದುವೆ ಮಾಡುತ್ತೇವೆ’ ಎಂದು ಮಾಲತಿ ಸುಧೀರ್​ (Malathi Sudhir) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?