ಪುನೀತ್ ಬಗ್ಗೆ ಭಾವುಕರಾಗಿ ಮಾತನಾಡಿದ ‘ಈ ಸುಂದರನ ಸನ್ಯಾಸಿ ಮಾಡಬಹುದೇ’ ಹಾಡಿನ ಗಾಯಕ

Updated on: Jun 21, 2023 | 9:10 AM

‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇ..’ ಹಾಡನ್ನು ಮಳವಳ್ಳಿ ಮಹದೇವಸ್ವಾಮಿ ಅವರು ಹಾಡಿದ್ದಾರೆ. ಅವರು ಪುನೀತ್ ಬಗ್ಗೆ ಮಾತನಾಡಿದ್ದಾರೆ.

‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇ..’ ಈ ಹಾಡು ಇತ್ತೀಚೆಗೆ ಸಖತ್ ಫೇಮಸ್ ಆಗಿದೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಈ ಹಾಡು ಹೆಚ್ಚು ಬಳಕೆಯಲ್ಲಿದೆ. ಇದನ್ನು ಮಳವಳ್ಳಿ ಮಹದೇವಸ್ವಾಮಿ ಅವರು ಹಾಡಿದ್ದಾರೆ. ಅವರಿಗೆ ರಾಜ್​ಕುಮಾರ್ (Rajkumar) ಕುಟುಂಬದ ಮೇಲೆ ವಿಶೇಷ ಪ್ರೀತಿ. ಪುನೀತ್ ರಾಜ್​ಕುಮಾರ್​ಗೆ (Puneeth Rajkumar) ಡಾಕ್ಟರೇಟ್ ಸಿಕ್ಕ ದಿನವೇ ಮಳವಳ್ಳಿ ಮಹದೇವಸ್ವಾಮಿ ಅವರಿಗೂ ಡಾಕ್ಟರೇಟ್ ಗೌರವ ಸಿಕ್ಕಿತ್ತು. ಆ ಬಗ್ಗೆ ಅವರು ಮಾತನಾಡಿದ್ದಾರೆ. ಆದಿನ ನನಗೆ ಆನಂದ ಭಾಷ್ಪ ಬಂದಿತ್ತು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More