ಬೆಂಗಳೂರಿಂದ ಮೈಸೂರಿಗೆ ವಿಶೇಷ ವಿಮಾನವೊಂದರಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ; ಡಿಕೆ ಶಿವಕುಮಾರ್ ಜೊತೆ ಆಗಮಿಸಿದರು

Updated on: Aug 30, 2023 | 2:07 PM

ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣ್ಯರನ್ನು ಸ್ವಾಗತಿಸಿದರು. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಅವುಗಳಲ್ಲಿ ಅನ್ನಭಾಗ್ಯ, ಶಕ್ತಿಯೋಜನೆ ಮತ್ತು ಗೃಹ ಜ್ಯೋತಿ ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಿದ್ದು ಇಂದು ಮೈಸೂರಲ್ಲಿ ನಾಲ್ಕನೇ ಯೋಜನೆ ಗೃಹ ಜ್ಯೋತಿಯನ್ನು ಅನುಷ್ಠಾನಗೊಳಿಸುತ್ತಿದೆ.

ಮೈಸೂರು: ನಗರದಲ್ಲಿ ಆಯೋಜಿಸಲಾಗಿರುವ ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗ್ಗೆ ಸ್ವಲ್ಪ ಹೊತ್ತಿಗೆ ಮೊದಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಸಂಸದ ರಾಹುಲ್ ಗಾಂಧಿ (Rahul Gandhi) ಆಗಮಿಸಿದರು. ಬೆಂಗಳೂರುನಿಂದ ವಿಶೇಷ ವಿಮಾನವೊಂದರಲ್ಲಿ ಖರ್ಗೆ ಮತ್ತು ರಾಹುಲ್; ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಅವರೊಂದಿಗೆ ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣ್ಯರನ್ನು ಸ್ವಾಗತಿಸಿದರು. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಅವುಗಳಲ್ಲಿ ಅನ್ನಭಾಗ್ಯ, ಶಕ್ತಿಯೋಜನೆ ಮತ್ತು ಗೃಹ ಜ್ಯೋತಿ ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಿದ್ದು ಇಂದು ಮೈಸೂರಲ್ಲಿ ನಾಲ್ಕನೇ ಯೋಜನೆ ಗೃಹ ಜ್ಯೋತಿಯನ್ನು ಅನುಷ್ಠಾನಗೊಳಿಸುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More