ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಖರ್ಗೆ ಹೇಳಿದ್ದಿಷ್ಟು
Mallikarjun Kharge

ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಖರ್ಗೆ ಹೇಳಿದ್ದಿಷ್ಟು

Updated on: Sep 07, 2025 | 1:41 PM

ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ದೇಶಾದ್ಯಂತ ಹೋರಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಶಿಫಾರಸ್ಸು ಮಾಡಿದೆ. ಈ ಮೂಲಕ ತಮ್ಮ ಪಕ್ಷದ ನೇತಾರ ರಾಹುಲ್ ಗಾಂಧಿ ಹೋರಾಟಕ್ಕೆ ಮೊದಲ ಹೆಜ್ಜೆಯಾಗಿ ಸಿದ್ದರಾಮಯ್ಯ ಸರ್ಕಾರ ಈ ತಿರ್ಮಾನ ಕೈಗೊಂಡಿದೆ.ಇನ್ನು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಕರ್ನಾಟಕ ಸರ್ಕಾರದ ನಿರ್ಧಾರ ಶ್ಲಾಘಿಸಿದ್ದಾರೆ.

ಕಲಬುರಗಿ, (ಸೆಪ್ಟೆಂಬರ್ 07): ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ದೇಶಾದ್ಯಂತ ಹೋರಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್ ಬಳಕೆಗೆ ಶಿಫಾರಸ್ಸು ಮಾಡಿದೆ. ಈ ಮೂಲಕ ತಮ್ಮ ಪಕ್ಷದ ನೇತಾರ ರಾಹುಲ್ ಗಾಂಧಿ ಹೋರಾಟಕ್ಕೆ ಮೊದಲ ಹೆಜ್ಜೆಯಾಗಿ ಸಿದ್ದರಾಮಯ್ಯ ಸರ್ಕಾರ ಈ ತಿರ್ಮಾನ ಕೈಗೊಂಡಿದೆ.ಇನ್ನು ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಕರ್ನಾಟಕ ಸರ್ಕಾರದ ನಿರ್ಧಾರ ಶ್ಲಾಘಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಳೆದ ಚುನಾವಣೆ ವೇಳೆ ಇವಿಎಂನಲ್ಲಿ ಮಹಾಮೋಸ ಆಗಿದೆ. ನಾನು ಚುನಾವಣೆಯಲ್ಲಿ ಸೋತಾಗ ಸಹ ಮತಗಳ್ಳತನವಾಗಿತ್ತು. ಅಭಿವೃದ್ಧಿ ಕಾರ್ಯಕ್ಕೆ ಜನಮನ್ನಣೆ ಸಿಕ್ಕಿ ಗೆಲ್ಲುತ್ತೇನೆಂಬ ವಿಶ್ವಾಸವಿತ್ತು. ಆದರೆ ನನ್ನ ನಿರೀಕ್ಷೆ ಹುಸಿಯಾಯಿತು. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ನನಗೆ ಕಡಿಮೆ ಮತ ಬಂದಿದೆ. ನಮ್ಮ ಕಣ್ಣೆದುರೆ ಮೋಸ ಆಗಿದೆ . ಬಿಹಾರ, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧೆಡೆ ಮತಗಳ್ಳತನ ಆಗಿದೆ ಎಂದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More