Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆರೋಗ್ಯ ವಿಚಾರಿಸಲು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರಂತೆ: ಜಿ ಪರಮೇಶ್ವರ್, ಗೃಹ ಸಚಿವ

ಸಿಎಂ ಆರೋಗ್ಯ ವಿಚಾರಿಸಲು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದರಂತೆ: ಜಿ ಪರಮೇಶ್ವರ್, ಗೃಹ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 24, 2025 | 1:02 PM

ಹನಿ ಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ಸಲ್ಲಿಸದ ಹೊರತು ಗೃಹ ಇಲಾಖೆ ಏನೂ ಮಾಡಲಾಗದು, ಸುಮೋಟು ಪ್ರಕರಣ ದಾಖಲಿಸಿಕೊಳ್ಳಲು ಎಫ್​ಐಆರ್ ಆಗಿರಬೇಕು ಎಂದು ಪರಮೇಶ್ವರ್ ಹೇಳಿದರು. ಆಪ್ತರ ಸಲಹೆ ಕೇಳಿ ದೂರು ದಾಖಲಿಸುತ್ತೇನೆ ಎಂದು ರಾಜಣ್ಣ ಹೇಳಿರುವುದಕ್ಕೆ, ತನ್ನನ್ನೂ ಸೇರಿ ಅವರಿಗೆ ಬಹಳಷ್ಟು ಜನ ಆಪ್ತರಿದ್ದಾರೆ, ಯಾವ ಆಪ್ತರನ್ನು ಕೇಳುತ್ತಾರಂತೆ ಎಂದು ಸಚಿವ ನಗೆಯಾಡಿದರು.

ಬೆಂಗಳೂರು, 24ಮಾರ್ಚ್: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಯಾಕೆ ಭೇಟಿಯಾದರು ಅಂತ ಗೊತ್ತಿಲ್ಲ, ಸಿಎಂ ಮಂಡಿನೋವಿಂದ ಬಳಲಾರಂಭಿಸಿದ ಬಳಿಕ ಅವರನ್ನು ಭೇಟಿಯಾಗಿರಲಿಲ್ಲ, ಆರೋಗ್ಯ ವಿಚಾರಿಸಲು ಹೋಗಿದ್ದೆ ಎಂದು ಖರ್ಗೆ ಹೇಳಿದ್ದಾರೆ ಎಂದು ಹೇಳಿದರು. ಹನಿ ಟ್ರ್ಯಾಪ್ ಪ್ರಕರಣವನ್ನು ಡಿಸಿಎಂ ಡಿಕೆ ಶಿವಕುಮಾರ್ ಬೋಗಸ್ ಎಂದು ಹೇಳಿರುವುದಕ್ಕೆ ಗೃಹ ಸಚಿವ ಪ್ರತಿಕ್ರಿಯಿಸಲು ನಿರಾಕರಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಹನಿ ಟ್ರ್ಯಾಪ್ ಪ್ರಕರಣ ಹಿಟ್ ಅಂಡ್ ರನ್ ಆಗಬಾರದು, ಟಾರ್ಗೆಟ್ ಆಗಿರುವವರು ದೂರು ಸಲ್ಲಿಸಲಿ: ಡಿಕೆ ಶಿವಕುಮಾರ್