ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಈ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಜನಜಂಗುಳಿಯ ನಡುವೆ ಖರ್ಗೆ ಅವರು ಸಹಿ ಮಾಡಿ ಪ್ರಮಾಣಪತ್ರ ಪಡೆದರು.
ಬೆಂಗಳೂರು, ಜೂನ್ 12: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು (ಜೂನ್ 12) ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
