ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Edited By:

Updated on: Jun 12, 2026 | 2:26 PM

ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಈ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಜನಜಂಗುಳಿಯ ನಡುವೆ ಖರ್ಗೆ ಅವರು ಸಹಿ ಮಾಡಿ ಪ್ರಮಾಣಪತ್ರ ಪಡೆದರು.

ಬೆಂಗಳೂರು, ಜೂನ್​​ 12: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು (ಜೂನ್​​ 12) ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.