ಪ್ರಜ್ವಲ್ ರೇವಣ್ಣ ಬಗ್ಗೆ ಮಾತನಾಡುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ
ಪ್ರಜ್ವಲ್ ರೇವಣ್ಣ ಕುರಿತು ಮಾತನಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹಿಂದೇಟು ಹಾಕಿದ್ದಾರೆ. ಇನ್ನು ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಬಂಧನ ಕುರಿತು ಮಾತನಾಡಿದ ಖರ್ಗೆ, ಎಸ್ಐಟಿ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಯಾರು ಇಂತಹ ಕೆಲಸ ಮಾಡುತ್ತಾರೆ ಅವರಿಗೆ ಬುದ್ಧಿ ಬರಬೇಕು. ಆ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದರು.
ಪ್ರಜ್ವಲ್ ರೇವಣ್ಣ ಕುರಿತು ಮಾತನಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹಿಂದೇಟು ಹಾಕಿದ್ದಾರೆ. ಇನ್ನು ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಬಂಧನ ಕುರಿತು ಮಾತನಾಡಿದ ಖರ್ಗೆ, ಎಸ್ಐಟಿ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಯಾರು ಇಂತಹ ಕೆಲಸ ಮಾಡುತ್ತಾರೆ ಅವರಿಗೆ ಬುದ್ಧಿ ಬರಬೇಕು. ಆ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದರು.
ಕಾನೂನಿನಿಂದ ಯಾರಿಗೂ ಬಿಡುಗಡೆ ಇಲ್ಲ, ಕಾನೂನು ಕಠಿಣ ಇದೆ, ಇದು ಹತ್ತಾರು ವರ್ಷಗಳಿಂದ ನಡೆಯತ್ತಿದೆ ಎಂದು ಹೇಳುತ್ತಿದ್ದಾರೆ. ಈ ಪ್ರಕರಣವನ್ನು ಯಾರೂ ರಾಜಕೀಯವಾಗಿ ಬಳಸಿಕೊಳ್ಳಬಾರದು. ಪ್ರಜ್ವಲ್ ಬಗ್ಗೆ ನಾನು ಮಾತನಾಡಲಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

