ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾತಾಡುವಷ್ಟು ದೊಡ್ಡವ ನಾನಲ್ಲ, ನನ್ನ ಮಾತುಗಳಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ: ಆರಗ ಜ್ಞಾನೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Aug 02, 2023 | 6:10 PM

ತಿಪಟೂರುನಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಈಶ್ವರ್ ಖಂಡ್ರೆ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಿಸಿ ನಿಂದಿಸಿದ್ದರು.

ಬೆಂಗಳೂರು: ವೇದಿಕೆ ಹತ್ತಿದಾಗ, ಕೈಗೆ ಮೈಕ್ ಸಿಕ್ಕಾಗ ವೀರಾವೇಶದಲ್ಲಿ ಮಾತಾಡುವ ನಮ್ಮ ನಾಯಕರು ಅದೇ ಭರದಲ್ಲಿ ಕೆಲ ಅಪಶಬ್ದಗಳನ್ನು ಪ್ರಯೋಗಿಸಿಬಿಡುತ್ತಾರೆ. ಈ ಪ್ರವೃತ್ತಿ ಪಕ್ಷಾತೀತವಾದದ್ದು! ಅಂದರೆ ಎಲ್ಲ ಪಕ್ಷಗಳ ನಾಯಕರು ಹಾಗೆ ಮಾಡುತ್ತಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಇತ್ತೀಚಿಗೆ ಕಸ್ತೂರಿ ರಂಗನ್ ವರದಿ (Kasturirangan report) ಜಾರಿಗೆ ಸರ್ಕಾರ ಬದ್ಧವಾಗಿದೆ ಅಂತ ಹೇಳಿದ್ದರು. ಇದೇ ಹಿನ್ನೆಲೆಯಲ್ಲಿ ತಿಪಟೂರುನಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಖಂಡ್ರೆ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಿಸಿ ನಿಂದಿಸಿದ್ದರು. ಅವರ ಕಾಮೆಂಟ್ ಗಳಿಗೆ ಕಾಂಗ್ರೆಸ್ ನಾಯಕರು ಉಗ್ರವಾಗಿ ಪ್ರತಿಕ್ರಿಯಿಸಲಾರಂಭಿಸಿದ ಬಳಿಕ ಜ್ಞಾನೇಂದ್ರ ಅವರಿಗೆ ತಮ್ಮ ತಪ್ಪನ ಅರಿವಾಗಿದೆ. ಬೆಂಗಳೂರಲ್ಲಿ ಇಂದು ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಮಾತಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯದ ಹಿರಿಯ ಮುತ್ಸದ್ದಿ, ಅವರನ್ನು ಟೀಕಿಸುವ ಯೋಗ್ಯತೆ ನನಗಿದೆ ಅಂತ ಭಾವಿಸುವುದಿಲ್ಲ, ಅವರ ವಿರುದ್ಧ ನಾನು ಮಾತಾಡಿಲ್ಲ, ಅಷ್ಟಾಗಿಯೂ ನನ್ನ ಮಾತಿಗಳಿಂದ ಖರ್ಗೆ ಮತ್ತು ಖಂಡ್ರೆ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.