AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಕನ್ನಡಿಗ ಪ್ರಧಾನ ಮಂತ್ರಿಯಾದರೆ ಯಾರಿಗೆ ತಾನೇ ಸಂತೋಷವಾಗಲ್ಲ? ಜಿ ಪರಮೇಶ್ವರ್, ಗೃಹ ಸಚಿವ

ದಲಿತ ಸಮುದಾಯದ ನಾಯಕನನ್ನು ಪ್ರಧಾನ ಮಂತ್ರಿ ಸ್ಥಾನದ ಅಭ್ಯರ್ಥಿ ಅಂತ ಪ್ರೊಜೆಕ್ಟ್ ಮಾಡಿದರೆ ಇಂಡಿಯ ಮೈತ್ರಿಕೂಟಕ್ಕೆ ನೆರವಾಗಬಹುದು ಎನ್ನುವ ಲೆಕ್ಕಾಚಾರ ಅದರ ನಾಯಕರು ಮಾಡಿಕೊಂಡಿರಬಹುದು. ಅದರೆ, ಖುದ್ದು ಮಲ್ಲಿಕಾರ್ಜುನ ಖರ್ಗೆಯವರೇ ಅದರ ಬಗ್ಗೆ ಹೆಚ್ಚು ಉತ್ಸಾಹ ತೋರುತ್ತಿಲ್ಲ, ವಾಸ್ತವವಾದಿಯಾಗಿ ತಮ್ಮ ವಿಚಾರವನ್ನು ಮುಂದಿಡುತ್ತಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 21, 2023 | 12:44 PM

Share

ಬೆಂಗಳೂರು: ಇಂಡಿಯ ಮೈತ್ರಿಕೂಟದ ಪ್ರಮುಖರಾಗಿರುವ ಅರವಿಂದ ಕೇಜ್ರಿವಾಲ್ (Aravind Kejriwal) ಮತ್ತು ಮಮತಾ ಬ್ಯಾನರ್ಜೀ (Mamata Banerjee) ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೈತ್ರಿಕೂಟಕ್ಕೆ ಬಹುಮತ ಸಿಕ್ಕರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನ ಮಂತ್ರಿ ಆಗಲಿದ್ದಾರೆ ಅನ್ನೋದು ದೇಶದಲ್ಲೀಗ ಭಾರೀ ಚರ್ಚೆಯ ವಿಷಯವಾಗಿದೆ. ಇಷ್ಟಕ್ಕೂ ಖರ್ಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಅಂತ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರನ್ನು ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ಆ ವಿಚಾರ ತನಗೇನೂ ತಿಳಿಯದು ಎಂದು ಹೇಳಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಅವರೇ ಆಗಿರುವುದರಿಂದ ಸ್ಪರ್ಧಿಸಬಯಸಿದಲ್ಲಿ ತಾವೆಲ್ಲ ಅವರ ಗೆಲುವಿಗೆ ಶ್ರಮಿಸಬೇಕಾಗುತ್ತದೆ ಎಂದರು. ಅವರು ಪ್ರಧಾನ ಮಂತ್ರಿಯಾದರೆ, ಹುದ್ದೆಯನ್ನು ಅಲಂಕರಿಸುವ ಎರಡನೇ ಕನ್ನಡಿಗ ಅನಿಸಿಕೊಳ್ಳುತ್ತಾರೆ, ಅದಕ್ಕಿಂತ ಹೆಚ್ಚಿನ ಸಂತೋಷ ಮತ್ತೇನಿದೆ ಅಂತ ಹೇಳಿದ ಪರಮೇಶ್ವರ್, ಆದರೆ ಅಂತ ಸನ್ನಿವೇಶ ನಿರ್ಮಾಣವಾಗಲು ಇಂಡಿಯ ಮೈತ್ರಿಕೂಟ ಬಿಜೆಪಿ ಜೊತೆ ಹೋರಾಡಬೇಕಾಗುತ್ತದೆ, ಅವಶ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ-ಅದಾದ ಬಳಿಕವೇ ಮುಂದಿನ ಯೋಚನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ