AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಕನ್ನಡಿಗ ಪ್ರಧಾನ ಮಂತ್ರಿಯಾದರೆ ಯಾರಿಗೆ ತಾನೇ ಸಂತೋಷವಾಗಲ್ಲ? ಜಿ ಪರಮೇಶ್ವರ್, ಗೃಹ ಸಚಿವ

ದಲಿತ ಸಮುದಾಯದ ನಾಯಕನನ್ನು ಪ್ರಧಾನ ಮಂತ್ರಿ ಸ್ಥಾನದ ಅಭ್ಯರ್ಥಿ ಅಂತ ಪ್ರೊಜೆಕ್ಟ್ ಮಾಡಿದರೆ ಇಂಡಿಯ ಮೈತ್ರಿಕೂಟಕ್ಕೆ ನೆರವಾಗಬಹುದು ಎನ್ನುವ ಲೆಕ್ಕಾಚಾರ ಅದರ ನಾಯಕರು ಮಾಡಿಕೊಂಡಿರಬಹುದು. ಅದರೆ, ಖುದ್ದು ಮಲ್ಲಿಕಾರ್ಜುನ ಖರ್ಗೆಯವರೇ ಅದರ ಬಗ್ಗೆ ಹೆಚ್ಚು ಉತ್ಸಾಹ ತೋರುತ್ತಿಲ್ಲ, ವಾಸ್ತವವಾದಿಯಾಗಿ ತಮ್ಮ ವಿಚಾರವನ್ನು ಮುಂದಿಡುತ್ತಿದ್ದಾರೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Dec 21, 2023 | 12:44 PM

ಬೆಂಗಳೂರು: ಇಂಡಿಯ ಮೈತ್ರಿಕೂಟದ ಪ್ರಮುಖರಾಗಿರುವ ಅರವಿಂದ ಕೇಜ್ರಿವಾಲ್ (Aravind Kejriwal) ಮತ್ತು ಮಮತಾ ಬ್ಯಾನರ್ಜೀ (Mamata Banerjee) ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೈತ್ರಿಕೂಟಕ್ಕೆ ಬಹುಮತ ಸಿಕ್ಕರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನ ಮಂತ್ರಿ ಆಗಲಿದ್ದಾರೆ ಅನ್ನೋದು ದೇಶದಲ್ಲೀಗ ಭಾರೀ ಚರ್ಚೆಯ ವಿಷಯವಾಗಿದೆ. ಇಷ್ಟಕ್ಕೂ ಖರ್ಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಅಂತ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರನ್ನು ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ಆ ವಿಚಾರ ತನಗೇನೂ ತಿಳಿಯದು ಎಂದು ಹೇಳಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಅವರೇ ಆಗಿರುವುದರಿಂದ ಸ್ಪರ್ಧಿಸಬಯಸಿದಲ್ಲಿ ತಾವೆಲ್ಲ ಅವರ ಗೆಲುವಿಗೆ ಶ್ರಮಿಸಬೇಕಾಗುತ್ತದೆ ಎಂದರು. ಅವರು ಪ್ರಧಾನ ಮಂತ್ರಿಯಾದರೆ, ಹುದ್ದೆಯನ್ನು ಅಲಂಕರಿಸುವ ಎರಡನೇ ಕನ್ನಡಿಗ ಅನಿಸಿಕೊಳ್ಳುತ್ತಾರೆ, ಅದಕ್ಕಿಂತ ಹೆಚ್ಚಿನ ಸಂತೋಷ ಮತ್ತೇನಿದೆ ಅಂತ ಹೇಳಿದ ಪರಮೇಶ್ವರ್, ಆದರೆ ಅಂತ ಸನ್ನಿವೇಶ ನಿರ್ಮಾಣವಾಗಲು ಇಂಡಿಯ ಮೈತ್ರಿಕೂಟ ಬಿಜೆಪಿ ಜೊತೆ ಹೋರಾಡಬೇಕಾಗುತ್ತದೆ, ಅವಶ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ-ಅದಾದ ಬಳಿಕವೇ ಮುಂದಿನ ಯೋಚನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ