AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮಾಜಿ MLA​ ಮಾತಿಗೆ ಬಿಕ್ಕಿ ಬಿಕ್ಕಿ ಅತ್ತ ಕಾಂಗ್ರೆಸ್ ಶಾಸಕ, ಅಷ್ಟಕ್ಕೂ ಆಗಿದ್ದೇನು?

ಬಿಜೆಪಿ ಮಾಜಿ MLA​ ಮಾತಿಗೆ ಬಿಕ್ಕಿ ಬಿಕ್ಕಿ ಅತ್ತ ಕಾಂಗ್ರೆಸ್ ಶಾಸಕ, ಅಷ್ಟಕ್ಕೂ ಆಗಿದ್ದೇನು?

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 23, 2025 | 10:26 PM

Share

ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹಾಗೂ ಬಿಜೆಪಿಯ ಮಾಜಿ‌ ಶಾಸಕ ಮಂಜುನಾಥಗೌಡ ನಡುವಿನ ವಾಕ್ಸಮರ ಮುಂದುವರೆದಿದೆ. ಅಪ್ಪಂಗೇ ಹುಟ್ಟಿದ್ದೀಯಾ ಎಂಬ ಮಾಜಿ‌ MLA ಮಂಜುನಾಥಗೌಡ ಮಾತಿಗೆ ನಂಜೇಗೌಡ ಸುದ್ದಿಗೋಷ್ಠಿಯಲ್ಲೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಾಜಿ‌ ಶಾಸಕ ಮಂಜುನಾಥಗೌಡನ 2ನೇ ಮುಖ ಅನಾವರಣಗೊಂಡಿದೆ. ಹೊಸಕೋಟೆ & ಕೋಡಿಹಳ್ಳಿ ಭಾಷೆ ಮಾಲೂರಿನ ಜನತೆಗೆ ಗೊತ್ತಾಗಿದೆ.

ಕೋಲಾರ, (ಸೆಪ್ಟೆಂಬರ್ 23): ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹಾಗೂ ಬಿಜೆಪಿಯ ಮಾಜಿ‌ ಶಾಸಕ ಮಂಜುನಾಥಗೌಡ ನಡುವಿನ ವಾಕ್ಸಮರ ಮುಂದುವರೆದಿದ್ದು, ರಾಜಜೀಯ ಆರೋಪ ಪ್ರತ್ಯಾರೋ ಇದೀಗ ವೈಯಕ್ತಿ ಬೈದಾಟಕ್ಕಿಳಿದೆ.  ಅಪ್ಪಂಗೇ ಹುಟ್ಟಿದ್ದೀಯಾ ಎಂಬ ಮಾಜಿ‌ MLA ಮಂಜುನಾಥಗೌಡ ಮಾತಿಗೆ ನಂಜೇಗೌಡ ಸುದ್ದಿಗೋಷ್ಠಿಯಲ್ಲೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಾಜಿ‌ ಶಾಸಕ ಮಂಜುನಾಥಗೌಡನ 2ನೇ ಮುಖ ಅನಾವರಣಗೊಂಡಿದೆ. ಹೊಸಕೋಟೆ & ಕೋಡಿಹಳ್ಳಿ ಭಾಷೆ ಮಾಲೂರಿನ ಜನತೆಗೆ ಗೊತ್ತಾಗಿದೆ. ಮಾಲೂರಿಗೆ ಇತಿಹಾಸವಿದೆ, ಅನೇಕ ಮಹನೀಯರು ಆಡಳಿತ ಮಾಡಿದ್ದಾರೆ. ಮರು ಮತ ಎಣಿಕೆ ವಿಷಯಕ್ಕೆ ಕೆಲವರು ಸಂಭ್ರಮಾಚರಣೆ ಮಾಡಿದರು. ಅದಕ್ಕೆ ನಾನು ಹುಚ್ಚರೆಂಬ ಪದ ಬಳಕೆ ಮಾಡಿದೆ. ಅದಕ್ಕೆ ಮಂಜುನಾಥಗೌಡ ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ನನ್ನ ತಂದೆ ತಾಯಿ‌ ಬಗ್ಗೆ ಮಾತನಾಡಿದ್ದಾರೆ. ಅಪ್ಪ ಅಮ್ಮನಿಗೆ ಹುಟ್ಟಿದ್ದೀಯಾ ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ನನಗೆ ತುಂಬಾ ನೋವಾಗಿದೆ. ಅಷ್ಟೇ ಅಲ್ಲ ನನ್ನ ಅಕ್ಕ, ತಂಗಿ, ಸಂಬಂಧಿಕರಿಗೂ ನೋವು ತಂದಿದೆ. ಅವರಿಗೆ (ಮಂಜುನಾಥಗೌಡ) ತಂದೆ, ತಾಯಿ, ಅಕ್ಕ, ತಂಗಿಯರು ಇಲ್ಲವಾ? ಎಂದು ಕಣ್ಣೀರಿಟ್ಟರು.

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More