AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ, ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್​

ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ, ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್​

ಗಂಗಾಧರ​ ಬ. ಸಾಬೋಜಿ
|

Updated on:Jun 10, 2023 | 3:44 PM

Share

ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್​ ಆಗಿದೆ.

ಮಂಗಳೂರು: ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ (assaulted) ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್​ ಆಗಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳಿಂದ ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಉಪ್ಪಿನಂಗಡಿಯ ಮಗು ಒಂದಕ್ಕೆ ಆರೋಗ್ಯ ಸಮಸ್ಯೆ ಹಿನ್ನೆಲೆ ಮುಸ್ಲಿಂ ಕುಟುಂಬದಿಂದ ಮಂತ್ರವಾದಿಗಳ ಸಂಪರ್ಕ ಮಾಡಿದ್ದಾರೆ. ವಾರದ ಹಿಂದೆ ಮನೆಗೆ ಹೋಗಿ ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಿದ್ದಾರೆ. ನಕಲಿ ಮಂತ್ರವಾದಿಯ ಪರಿಚಯದ ವ್ಯಕ್ತಿ ಅದೇ ಮನೆಗೆ ಬಂದಿದ್ದರು. ಈ ವೇಳೆ ಇವರ ವಂಚನೆ ಕಂಡು ಮನೆಯಲ್ಲೇ ನಕಲಿ ಮಂತ್ರವಾದಿ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಕರಣ ಠಾಣೆಯ ಮೆಟ್ಟಿಲೇರಿ ಬಳಿಕ ಮಾತುಕತೆಯ ಮೂಲಕ ಬಗೆಹರಿದಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jun 10, 2023 03:42 PM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More