ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ, ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್
ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಮಂಗಳೂರು: ನಕಲಿ ಮುಸ್ಲಿಂ ಮಂತ್ರವಾದಿಗಳಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ (assaulted) ಮಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳಿಂದ ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ ಕೇಳಿಬಂದಿದೆ. ಉಪ್ಪಿನಂಗಡಿಯ ಮಗು ಒಂದಕ್ಕೆ ಆರೋಗ್ಯ ಸಮಸ್ಯೆ ಹಿನ್ನೆಲೆ ಮುಸ್ಲಿಂ ಕುಟುಂಬದಿಂದ ಮಂತ್ರವಾದಿಗಳ ಸಂಪರ್ಕ ಮಾಡಿದ್ದಾರೆ. ವಾರದ ಹಿಂದೆ ಮನೆಗೆ ಹೋಗಿ ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಿದ್ದಾರೆ. ನಕಲಿ ಮಂತ್ರವಾದಿಯ ಪರಿಚಯದ ವ್ಯಕ್ತಿ ಅದೇ ಮನೆಗೆ ಬಂದಿದ್ದರು. ಈ ವೇಳೆ ಇವರ ವಂಚನೆ ಕಂಡು ಮನೆಯಲ್ಲೇ ನಕಲಿ ಮಂತ್ರವಾದಿ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಕರಣ ಠಾಣೆಯ ಮೆಟ್ಟಿಲೇರಿ ಬಳಿಕ ಮಾತುಕತೆಯ ಮೂಲಕ ಬಗೆಹರಿದಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್

