ಪುತ್ತೂರು: ಇಎನ್ಟಿ ಕ್ಲಿನಿಕ್ಗೆ ನುಗ್ಗಿ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ
ಇಎನ್ಟಿ ಕ್ಲಿನಿಕ್ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ವ್ಯಕ್ತಿಯೋರ್ವ ಅಟ್ಟಹಾಸ ನಡೆಸಿರುವ ಘಟನೆ ಪುತ್ತೂರು ತಾಲೂಕಿನ ದಬರಬೆಯಲ್ಲಿ ನಡೆದಿದೆ. ತನ್ನ ಪರಿಚಯಸ್ಥರನ್ನು ತಪಾಸಣೆಗೆ ಬೇಗ ಬಿಟ್ಟಿಲ್ಲ ಎಂದು ರೊಚ್ಚಿಗೆದ್ದ ವ್ಯಕ್ತಿ, ಕ್ಲಿನಿಕ್ ಸಿಬ್ಬಂದಿ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿರೋ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು, ಡಿಸೆಂಬರ್ 02: ಪರಿಚಯಸ್ಥರನ್ನು ತಪಾಸಣೆಗೆ ಬೇಗ ಒಳಗೆ ಬಿಟ್ಟಿಲ್ಲವೆಂದು ಇಎನ್ಟಿ ಕ್ಲಿನಿಕ್ಗೆ ನುಗ್ಗಿ ಸಿಬ್ಬಂದಿ ಮೇಲೆ ದುಷ್ಕರ್ಮಿಯೋರ್ವ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ದರ್ಬೆಯಲ್ಲಿ ನಡೆದಿದೆ. ಡಾ.ರಾಮಮೋಹನ ರಾವ್ರವರ ಕ್ಲಿನಿಕ್ಗೆ ನುಗ್ಗಿದ ಬಪ್ಪಳಿಗೆ ನಿವಾಸಿ ಇಬ್ರಾಹಿಂ, ಸಿಬ್ಬಂದಿ ಶ್ರೀಕಾಂತ್ ಮೇಲೆ ಹಲ್ಲೆ ನಡೆಸಿ ಗ್ಲಾಸ್ ಪುಡಿಪುಡಿಗೈದಿದ್ದಾನೆ. ಅಲ್ಲದೆ ಕ್ಲಿನಿಕ್ಗೆ ಬಂದಿದ್ದವರನ್ನು ಬೆದರಿಸಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ನವೆಂಬರ್ 29ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕ್ಲಿನಿಕ್ಗೆ ನುಗ್ಗಿ ದಾಂಧಲೆ ನಡೆಸಿದ ಇಬ್ರಾಹಿಂ ವಿರುದ್ಧ ಕೇಸ್ ದಾಖಲಾಗಿದ್ದು, ಸಿಸಿಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us