ಮೆಡಿಕಲ್​​ ಶಾಪ್​ ನಲ್ಲಿ ಮಾತ್ರೆ ಖರೀದಿಸುವಾಗಲೇ ಹೃದಯಾಘಾತ, ಕುಸಿದು ಬೀಳುತ್ತಿರುವ ದೃಶ್ಯ ಇಲ್ಲಿದೆ

Edited By:

Updated on: Jul 01, 2025 | 7:26 PM

ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರತಿ ದಿನ ಎರಡ್ಮೂರು ಜನ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲೂ ಸಹ ವ್ಯಕ್ತಿಯೋರ್ವ ಮೆಡಿಕಲ್ ಶಾಪ್​ ನಲ್ಲಿ ಮಾತ್ರೆ ಖದೀಸುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ವಿಶ್ವನಾಥ್(60) ಎನ್ನುವರು ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ಮಾತ್ರೆ ಖರೀದಿಸುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು, (ಜುಲೈ 01): ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರತಿ ದಿನ ಎರಡ್ಮೂರು ಜನ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲೂ ಸಹ ವ್ಯಕ್ತಿಯೋರ್ವ ಮೆಡಿಕಲ್ ಶಾಪ್​ ನಲ್ಲಿ ಮಾತ್ರೆ ಖದೀಸುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ವಿಶ್ವನಾಥ್(60) ಎನ್ನುವರು ಚಿಕ್ಕಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ಮಾತ್ರೆ ಖರೀದಿಸುವಾಗಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಇನ್ನು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಯಲ್ಲಿ ಸೆರೆಯಾಗಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ 2 ತಿಂಗಳಲ್ಲಿ 13 ಜನ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಜನ ಆತಂಕಗೊಂಡಿದ್ದಾರೆ.

Published on: Jul 01, 2025 07:25 PM
Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More